ಮೂಲ್ಕಿ: ಯಕ್ಷಗಾನ ಕಟೀಲು ದುರ್ಗೆಗೆ ಅತೀ ಪ್ರಿಯವಾದ ಸೇವೆಯಾಗಿದ್ದು ಆರೂ ಮೇಳಗಳಿಂದ ಏಳು ಮೇಳಗಳಾಗುತ್ತಿರುವುದು ಸಾಮಾನ್ಯ ವಿಷಯವಲ್ಲ, ದೇವರ ಸೇವೆಯೊಂದಿಗೆ ಕಲೆ ಮತ್ತು ಕಲಾವಿದರಿಗೆ ಆದರೆಯಾಗುತ್ತದೆ ಎಂದು ಕಾಣಿಯೂರು ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ 7ನೇ ಮೇಳದ ಪ್ರಾರಂಭೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ದೇವಸ್ಥಾನದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಆಡಳಿತ ಮಂಡಳಿಯ ಅಧ್ಯಕ್ಷ ಸನತ್ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ದೇವಸ್ಥಾನದ ವೇದವ್ಯಾಸ ತಂತ್ರಿ, ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.