ADVERTISEMENT

ನಾರಾಯಣ ಗುರು ಸಂಶೋಧನಾ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 16:33 IST
Last Updated 7 ಡಿಸೆಂಬರ್ 2021, 16:33 IST
ಅರುಣ್ ಉಳ್ಳಾಲ್
ಅರುಣ್ ಉಳ್ಳಾಲ್   

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಈ ವರ್ಷ ಆರಂಭಿಸಿದ ‘ನಾರಾಯಣ ಗುರು ಸಂಶೋಧನಾ ಪ್ರಶಸ್ತಿ’ಗೆ ಸಂಶೋಧಕ ಡಾ. ಅರುಣ್ ಉಳ್ಳಾಲ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು ಬಹುಮಾನ ಒಳಗೊಂಡಿದೆ. ಪ್ರಶಸ್ತಿ ಪುರಸ್ಕೃತ ಕೃತಿಯು ವಿಶ್ವವಿದ್ಯಾಲಯದ ಪ್ರಸಾರಾಂಗದ ಮೂಲಕ ಮುದ್ರಣಗೊಂಡು ಪ್ರಶಸ್ತಿ ಪ್ರದಾನ ಸಮಾರಂಭದಂದು ಬಿಡುಗಡೆಯಾಗಲಿದೆ. ಡಾ. ಅರುಣ್ ಉಳ್ಳಾಲ್ ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT