ADVERTISEMENT

ಕುಲಾಯಿತೋಡು: ಎನ್ಐಎ ತಂಡದಿಂದ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 9:47 IST
Last Updated 5 ಮಾರ್ಚ್ 2024, 9:47 IST
ಎನ್ಐಎ
ಎನ್ಐಎ   

ಸುಳ್ಯ(ದಕ್ಷಿಣ ಕನ್ನಡ): ಇಲ್ಲಿನ ಬೆಳ್ಳಾರೆ ಎಣ್ಮೂರು ಸಮೀಪದ ಕಲ್ಲೇರಿಯ ಕುಲಾಯಿತೋಡು ಎಂಬಲ್ಲಿನ ಮನೆಯೊಂದನ್ನು ರಾಷ್ಡ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಅಧಿಕಾರಿಗಳ ತಂಡ ಮಂಗಳವಾರ ಪರಿಶೀಲನೆ ನಡೆಸಿದೆ.

ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದ ಕೇರಳದ ವ್ಯಕ್ತಿಯನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

'ಶಸ್ತ್ರಾಸ್ತ್ರ ನಿಷೇಧ ಕಾಯ್ದೆಯನ್ವಯ ದಾಖಲಾಗಿದ್ದ ಪ್ರಕರಣ ಸಂಬಂಧ ಕೇರಳದ ಬಿಜು ಅಬ್ರಹಾಂ ಎಂಬುವರನ್ನು ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ' ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.