ADVERTISEMENT

ಕೊಲ್ಲೂರು: ನವರಾತ್ರಿ ಉತ್ಸವದ ಸಂಭ್ರಮ

ರಾಜೇಶ್‌ ಕೆ.ಸಿ
Published 30 ಸೆಪ್ಟೆಂಬರ್ 2019, 11:03 IST
Last Updated 30 ಸೆಪ್ಟೆಂಬರ್ 2019, 11:03 IST
ಕುಂದಾಪುರ ತಾಲ್ಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ  ನವರಾತ್ರಿ ಉತ್ಸವದ ಅಂಗವಾಗಿ ತಂತ್ರಿ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ ಶೆಟ್ಟಿ, ಸದಸ್ಯರಾದ ರಮೇಶ್‌ ಗಾಣಿಗ, ಅಭಿಲಾಷ್‌ ಪಿ.ವಿ, ನರಸಿಂಹ ಹಳಗೇರಿ, ಕಾರ್ಯನಿರ್ವಹಣಾಧಿಕಾರಿ ಹೆಚ್‌.ಕೃಷ್ಣಮೂರ್ತಿ ಇದ್ದರು
ಕುಂದಾಪುರ ತಾಲ್ಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ  ನವರಾತ್ರಿ ಉತ್ಸವದ ಅಂಗವಾಗಿ ತಂತ್ರಿ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ ಶೆಟ್ಟಿ, ಸದಸ್ಯರಾದ ರಮೇಶ್‌ ಗಾಣಿಗ, ಅಭಿಲಾಷ್‌ ಪಿ.ವಿ, ನರಸಿಂಹ ಹಳಗೇರಿ, ಕಾರ್ಯನಿರ್ವಹಣಾಧಿಕಾರಿ ಹೆಚ್‌.ಕೃಷ್ಣಮೂರ್ತಿ ಇದ್ದರು   

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕಾಗಿ ದೇಗುಲದ ಆಡಳಿತ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ದೇಶ, ವಿದೇಶಗಳಿಂದ ಉತ್ಸವದಲ್ಲಿ ಪಾಲ್ಗೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಸೆ.29 ರಿಂದ ಪ್ರಾರಂಭಗೊಂಡಿರುವ ನವರಾತ್ರಿಯ ಉತ್ಸವದ ಆಚರಣೆಗಳು ಅ.08 ರವರೆಗೂ ನಡೆಯಲಿದೆ. ನವರಾತ್ರಿಯ ಅಂಗವಾಗಿ ದೆವಸ್ಥಾನದಲ್ಲಿ ದಿನಂಪ್ರತಿ ನಡೆಯುವ ಕಟ್ಟಕಟ್ಟಳೆ ಪೂಜೆಗಳ ಜತೆಯಲ್ಲಿ ನವರಾತ್ರಿಯ ವಿಶೆಷ ಪೂಜೆ ಹಾಗೂ ಉತ್ಸವಗಳು ನಡೆಯಲಿದೆ. ಅ.7 ರಂದು ಸೋಮವಾರ ಮಹಾ ನವಮಿಯ ಪ್ರಯುಕ್ತ ಬೆಳಿಗ್ಗೆ 11.30 ಕ್ಕೆ ಚಂಡಿಕಾಯಾಗ ಹಾಗೂ ಮಧ್ಯಾಹ್ನ 1.50 ಕ್ಕೆ ರಥೋತ್ಸವ ಜರುಗಲಿದೆ.

ಅ.08 ರಂದು ವಿಜಯದಶಮಿಯ ಪ್ರಯುಕ್ತ ಬೆಳಿಗ್ಗೆ ವಿದ್ಯಾರಂಭ, ನವಾನ್ನ ಪ್ರಾಶನ ಹಾಗೂ ಸಂಜೆ 5.30ಕ್ಕೆ ಶ್ರೀ ಮೂಕಾಂಬಿಕಾ ದೇವಿಯ ವಿಜಯೋತ್ಸವ ನಡೆಯಲಿದೆ. ಉತ್ಸವ ಆಚರಣೆಯ ಅಂಗವಾಗಿ ಪ್ರತಿ ದಿನ ಅಪರಾಹ್ನ 3.00 ಗಂಟೆಯಿಂದ ರಾತ್ರಿ 11ರ ವರೆಗೆ ದೇಶದ ವಿವಿಧ ಭಾಗದ ಕಲಾ ತಂಡಗಳಿಂದ ಸೇವಾರೂಪವಾಗಿ ಶ್ರೀ ದೇವಳದ ಸ್ವರ್ಣಮುಖಿ ರಂಗಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ADVERTISEMENT

ಕ್ಷೇತ್ರಕ್ಕಾಗಮಿಸುವ ಭಕ್ತರಿಗೆ ಯಾವುದೆ ತೊಂದರೆಯಾಗದಂತೆ ಹಲವು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಸತಿ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ. ದಿನದ 24 ಗಂಟೆ ಉಚಿತ ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರದ ಸೌಲಭ್ಯ ಕಲ್ಪಿಸಲಾಗಿದೆ. ರೈಲಿನಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಉಡುಪಿ, ಕುಂದಾಪುರ, ಬೈಂದೂರು ರೈಲ್ವೆ ನಿಲ್ದಾಣದಿಂದ ಕೊಲ್ಲೂರಿಗೆ ನಿರಂತರವಾಗಿ ನೇರ ಬಸ್ ಸೇವೆಯನ್ನು ಕಲ್ಪಿಸಲು ಸಂಬಂಧಿತರಿಗೆ ಮಾಹಿತಿ ನೀಡಲಾಗಿದೆ.

ಭಕ್ತರ ವಾಹನ ನಿಲುಗಡೆಗಾಗಿ ಈಗ ಇರುವ ವಾಹನ ಪಾರ್ಕಿಂಗ್‌ ಸ್ಥಳದ ಜೊತೆಗೆ ಹೆಚ್ಚುವರಿಯಾಗಿ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ನವರಾತ್ರಿ ಹಾಗೂ ದಶಮಿ ಉತ್ಸವದ ಆಚರಣೆಗಾಗಿ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳಿಗಾಗಿ ವಿಶೇಷ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿರುವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್‌ಕುಮಾರ ಎಂ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಚ್‌.ಕೃಷ್ಣಮೂರ್ತಿಯವರು ಪ್ರತಿ ದಿವಸ ಶ್ರೀ ದೇವಳದ ದಾಸೋಹ ಭವನದಲ್ಲಿ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ದೀಪಾಲಂಕಾರ: ನವರಾತ್ರಿ ಸಂಭ್ರವದ ಅಂಗವಾಗಿ ದೇವಸ್ಥಾನಕ್ಕೆ ವಿದ್ಯುತ್ ದೀಪ ಹಾಗೂ ಹೂವಿನ ಅಲಂಕಾರ ಮಾಡಲಾಗಿದ್ದು, ಸಂಜೆಯ ಬಳಿಕ ದೇವಸ್ಥಾನದ ವಿದ್ಯುತ್ ಅಲಂಕಾರ ನೋಡುಗರ ಕಣ್ಮನ ಸೆಳೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.