ಉಪ್ಪಿನಂಗಡಿ:ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಮೀಪ ನೇಲ್ಯಡ್ಕ ಎಂಬಲ್ಲಿ ಬುಲೆಟ್ ಟ್ಯಾಂಕರ್ ಪಲ್ಟಿಯಾಗಿ, ಗ್ಯಾಸ್ ಸೋರಿಕೆ ಆಗಲಾರಂಭಿಸಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ನಿರ್ಮಿಸಲಾಗಿದೆ.
ಗ್ಯಾಸ್ ತುಂಬಿಸಿಕೊಂಡುಮಂಗಳೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಲಾರಿ ಚಾಲಕ ತಮಿಳುನಾಡಿನ ಫಣಿರಾಜ ಎಂಬವರು ಗಾಯಗೊಂಡಿದ್ದಾರೆ.
ಗ್ಯಾಸ್ ಸೋರಿಕೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ನೀಡಲಾಗಿದ್ದು, ಉಪ್ಪಿನಂಗಡಿ-ಕಡಬ-ನೆಟ್ಟಣ ಮೂಲಕ ಗುಂಡ್ಯಕ್ಕೆ ಪರ್ಯಾಯ ರಸ್ತೆಯಾಗಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.