ADVERTISEMENT

ಸುರತ್ಕಲ್ | ಸಂಚಾರಿ ಪೊಲೀಸ್ ಠಾಣೆಗೆ ನೂತನ ಕಟ್ಟಡ

ಕಮಿಷನರ್ ಕುಲದೀಪ್‌ ಕುಮಾರ್‌ ಜೈನ್‌ ಅವರಿಂದ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 5:10 IST
Last Updated 21 ಮಾರ್ಚ್ 2023, 5:10 IST
ಸಂಚಾರ ಪೊಲೀಸ್‌ ಠಾಣೆಯನ್ನು ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್‌ ಜೈನ್‌, ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟಿಸಿದರು
ಸಂಚಾರ ಪೊಲೀಸ್‌ ಠಾಣೆಯನ್ನು ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್‌ ಜೈನ್‌, ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟಿಸಿದರು   

ಸುರತ್ಕಲ್: ಬೈಕಂಪಾಡಿಯ ಎಪಿಎಂಸಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್‌ ಠಾಣೆಯ ನೂತನ ಕಚೇರಿ ಸೋಮವಾರ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಉದ್ಘಾಟನೆಗೊಂಡಿತು.

ನೂತನ ಪೊಲೀಸ್‌ ಠಾಣೆಯನ್ನು ಮಂಗಳೂರು ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್‌ ಜೈನ್‌ ಉದ್ಘಾಟಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ. ಭರತ್‌ ಶೆಟ್ಟಿ ವೈ ಮಾತನಾಡಿ, ‘ಇಲ್ಲಿ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುವ ಕೆಲಸವಾಗಬೇಕು’ ಎಂದರು.

ADVERTISEMENT

ಕಟ್ಟಡದ ಗುತ್ತಿಗೆದಾರ ಜನಾರ್ದನ ಬಾಬು, ಎಂಜಿನಿಯರ್‌ ಸನ್ನೇಗೌಡ, ಪೊಲೀಸ್‌ ಹೌಸಿಂಗ್‌ ಕಾರ್ಪೊರೇಷನ್‌ ಅಧಿಕಾರಿ ಪ್ರಜ್ಞಾ ಆನಂದ್‌, ಎಂಜಿನಿ ಯರ್‌ ಸಂಜಯ್‌ ಅವರನ್ನು ಸನ್ಮಾನಿಸ ಲಾಯಿತು. ಡಿಸಿಪಿ ಅನ್ಶುಕುಮಾರ್‌, ದಿನೇಶ್‌ ಇದ್ದರು.

ಉತ್ತರ ಸಂಚಾರ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಸುರೇಶ್‌ ಸ್ವಾಗತಿಸಿದರು. ಎಸಿಪಿ ಗೀತಾ ಕುಲಕರ್ಣಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.