ADVERTISEMENT

ಎನ್‌ಎಫ್‌ಎಸ್‌ಸಿ ಅಧ್ಯಕ್ಷರ ಭೇಟಿ: ಡಿಸಿಸಿ ಬ್ಯಾಂಕ್ ಕಾರ್ಯಕ್ಕೆ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 6:14 IST
Last Updated 14 ಏಪ್ರಿಲ್ 2022, 6:14 IST
ನ್ಯಾಷನಲ್ ಫೆಡರೇಶನ್ ಆಫ್ ಸ್ಟೇಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೊಂಡೂರು ರವೀಂದರ್ ರಾವ್ ಅವರನ್ನು ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ರವೀಂದ್ರ ಅವರು ಸನ್ಮಾನಿಸಿದರು.
ನ್ಯಾಷನಲ್ ಫೆಡರೇಶನ್ ಆಫ್ ಸ್ಟೇಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೊಂಡೂರು ರವೀಂದರ್ ರಾವ್ ಅವರನ್ನು ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ರವೀಂದ್ರ ಅವರು ಸನ್ಮಾನಿಸಿದರು.   

ಮಂಗಳೂರು: ನ್ಯಾಷನಲ್ ಫೆಡರೇಶನ್ ಆಫ್ ಸ್ಟೇಟ್ ಕೋ ಆಪರೇಟಿವ್ ಬ್ಯಾಂಕ್ ಇದರ ಅಧ್ಯಕ್ಷ ಕೊಂಡೂರು ರವೀಂದರ್ ರಾವ್ ಎಸ್‌ಸಿಡಿಸಿಸಿ ಬ್ಯಾಂಕಿಗೆ ಬುಧವಾರ ಭೇಟಿ ನೀಡಿ ಬ್ಯಾಂಕಿನ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಜಿಲ್ಲೆಯ ರೈತ ಸಮುದಾಯದ ಒಡನಾಡಿಯಾಗಿ ರೈತಸ್ನೇಹಿ ಬ್ಯಾಂಕ್ ಆಗಿದೆ. ದೇಶದ ಸಹಕಾರಿ ಆಂದೋಲನಕ್ಕೆ ಡಿಸಿಸಿ ಬ್ಯಾಂಕ್ ಮಾದರಿಯಾಗಿದೆ. ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಉತ್ತಮ ನಾಯಕತ್ವದಲ್ಲಿ ಬ್ಯಾಂಕ್ ಅಭಿವೃದ್ಧಿಯ ಪಥವನ್ನು ಕಂಡಿದೆ. ಗ್ರಾಮೀರಿಗೆ ಉತ್ತಮ ಸೇವೆ ನೀಡು ತ್ತಿರುವ, ಬ್ಯಾಂಕ್ ದೊಡ್ಡ ಪ್ರಗತಿಯನ್ನು ಮಾಡಿದೆ ಎಂದು ಶ್ಲಾಘಿಸಿದರು.

ಬ್ಯಾಂಕಿನ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ರವೀಂದ್ರ ಬಿ. ಅವರು ಬ್ಯಾಂಕಿನ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೊಂಡೂರು ರವೀಂದರ್ ರಾವ್ ಅವರನ್ನು ಬ್ಯಾಂಕ್ ವತಿಯಿಂದ ಸನ್ಮಾನಿ ಸಲಾಯಿತು. ಬ್ಯಾಂಕಿನ ಮಹಾ ಪ್ರಬಂಧಕ ಗೋಪಿನಾಥ್ ಭಟ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.