ಮಂಗಳೂರು: ನಗರದಲ್ಲಿನ ಪಿಎಫ್ಐ, ಎಸ್ಡಿಪಿಐ ಜಿಲ್ಲಾ ಘಟಕದ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳಗಿನಜಾವ 3.30 ರ ಸುಮಾರಿಗೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಕಚೇರಿಗಳು ಸೇರಿದಂತೆ ನಗರದ 8 ಕಡೆ ಈ ಸಂಘಟನೆಗಳ ಮುಖಂಡರ ಮನೆಗಳಲ್ಲಿ ಶೋಧ ನಡೆಯುತ್ತಿದೆ ಎನ್ನಲಾಗಿದೆ.
ಪಿಎಫ್ಐ, ಎಸ್ಡಿಪಿಐ ಕಚೇರಿ ಇರುವ ನೆಲ್ಲಿಕಾಯಿ ರಸ್ತೆಯ ಎರಡು ಬದಿಗಳಲ್ಲೂ ಸಿಆರ್ಪಿಎಫ್ ಪಡೆಗಳ ಬಂದೋಬಸ್ತ್ ಹಾಕಲಾಗಿದೆ. ಎನ್ಐಎ ಅಧಿಕಾರಿಗಳು ಕಚೇರಿಯೊಳಗೆ ಪರಿಶೀಲನೆ ಮುಂದುವರೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.