ಮಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ ) ಅಧಿಕಾರಿಗಳ ತಂಡವು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದು, ಪುತ್ತೂರು ಹಾಗೂ ಬಂಟ್ವಾಳ ತಾಲ್ಲೂಕಿನ ಕೆಲವೆಡೆ ಸ್ಥಳೀಯ ಪೊಲೀಸರ ನೆರವಿನಿಂದ ಬುಧವಾರ ಶೋಧ ಕಾರ್ಯದಲ್ಲಿ ತೊಡಗಿದೆ.
ಇಸ್ಲಾಮಿಕ್ ಸ್ಟೇಟ್ ಜೊತೆ ಸೇರಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದವರ ಶೋಧಕ್ಕಾಗಿ ಎನ್ಐಎ ತಂಡ ಜಿಲ್ಲೆಗೆ ಭೇಟಿ ನೀಡಿದೆ. ಹೆಚ್ಚಿನ ಮಾಹಿತಿ ಲಭ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.