ADVERTISEMENT

‘ಧಾರ್ಮಿಕ ಕಾರ್ಯಗಳಿಗೆ ವಿನಾಯಿತಿ ನೀಡಿ’

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 7:31 IST
Last Updated 11 ಏಪ್ರಿಲ್ 2021, 7:31 IST
ಶಾಸಕರಾದ ವೇದವ್ಯಾಸ್ ಕಾಮತ್‌ ಹಾಗೂ ಡಾ.ವೈ.ಭರತ್‌ ಶೆಟ್ಟಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್‌ ನಿಯೋಗ ನಗರ ಪೊಲೀಸ್‌ ಕಮಿಷನರ್ ಎನ್‌. ಶಶಿಕುಮಾರ್ ಅವರೊಂದಿಗೆ ಶನಿವಾರ ಚರ್ಚೆ ನಡೆಸಿತು.
ಶಾಸಕರಾದ ವೇದವ್ಯಾಸ್ ಕಾಮತ್‌ ಹಾಗೂ ಡಾ.ವೈ.ಭರತ್‌ ಶೆಟ್ಟಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್‌ ನಿಯೋಗ ನಗರ ಪೊಲೀಸ್‌ ಕಮಿಷನರ್ ಎನ್‌. ಶಶಿಕುಮಾರ್ ಅವರೊಂದಿಗೆ ಶನಿವಾರ ಚರ್ಚೆ ನಡೆಸಿತು.   

ಮಂಗಳೂರು: ನಗರದಲ್ಲಿ ನಡೆಯಲಿರುವ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡುವಂತೆ ವಿಶ್ವ ಹಿಂದೂ ಪರಿಷತ್‌, ನಗರ ಪೊಲೀಸ್‌ ಕಮಿಷನರ್‌ಗೆ ಮನವಿ ಮಾಡಿದೆ.

ಕೋವಿಡ್–19 ನಿಂದಾಗಿ ಕಳೆದ ವರ್ಷವೂ ಧಾರ್ಮಿಕ ಕಾರ್ಯಕ್ರಮ ಗಳನ್ನು ನಡೆಸಲು ಸಾಧ್ಯವಾಗಿಲ್ಲ. 2 ತಿಂಗಳಿಂದ ಸಾಕಷ್ಟು ಕಡೆ ದೈವಾರಾ ಧನೆಯ ನೇಮ, ಕೋಲ, ಜಾತ್ರೆ, ನಾಗಮಂಡಲ, ಬ್ರಹ್ಮಕಲಶ, ಯಕ್ಷಗಾನ ದಂತಹ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿವೆ ಎಂದು ತಿಳಿಸಿದೆ.

ಈಗಾಗಲೇ ದಿನಾಂಕ ನಿಗದಿ ಯಾಗಿದ್ದು, ಸಿದ್ಧತೆಗಳನ್ನೂ ಮಾಡ ಲಾಗಿದೆ. ಆರ್ಥಿಕ ಸಮಸ್ಯೆಯ ನಡುವೆಯೂ ನಾಡಿನ ಒಳಿತಿಗಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕಷ್ಟು ಖರ್ಚು ಮಾಡಲಾಗಿದೆ. ಒಂದು ವೇಳೆ ಕಾರ್ಯಕ್ರಮ ನಡೆಯದೇ ಇದ್ದರೆ, ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಲಿದೆ ಎಂದು ಹೇಳಿದೆ.

ADVERTISEMENT

ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಕೋವಿಡ್‌–19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಕಾರ್ಯಕ್ರಮಗಳನ್ನು ನಡೆಸಲು ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.