ADVERTISEMENT

ಪ್ರವೀಣ್ ನೆಟ್ಟಾರು ಪತ್ನಿ, ನೂತನಕುಮಾರಿಗೆ ಉದ್ಯೋಗ ಕೊಡಿಸಲು ಕ್ರಮ: ಪದ್ಮರಾಜ್

​ಪ್ರಜಾವಾಣಿ ವಾರ್ತೆ
Published 27 ಮೇ 2023, 12:49 IST
Last Updated 27 ಮೇ 2023, 12:49 IST
ಪ್ರವೀಣ್ ನೆಟ್ಟಾರು ಹತ್ಯೆ
ಪ್ರವೀಣ್ ನೆಟ್ಟಾರು ಹತ್ಯೆ   

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ದಿ. ಪ್ರವೀಣ್ ನೆಟ್ಟಾರು ಪತ್ನಿಯ ಉದ್ಯೋಗದ ಬಗ್ಗೆ ಬಿಜೆಪಿಯವರು ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಇವರ ಇಂತಹ ಕಪಟ ನಾಟಕ ಸಾಮಾನ್ಯ ಜನತೆಗೆ ಈಗಾಗಲೇ ತಿಳಿದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಟೀಕಿಸಿದ್ದಾರೆ.

ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರಿಗೆ ಮುಖ್ಯಮಂತ್ರಿಯವರ ವಿಶೇಷ ಅಧಿಕಾರ ಬಳಸಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ್ದಾರೆ. ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ ಎನ್ನುವ ಸಾಮಾನ್ಯ ತಿಳಿವಳಿಕೆ ಬಿಜೆಪಿಯ ಶಾಸಕರು, ಸಂಸದರಿಗೆ ಇಲ್ಲವೆ? ಅದೇ ರೀತಿ ನೂತನಕುಮಾರಿ ಅವರ ಕೆಲಸವೂ ರದ್ದಾಗಿದೆ. ಬಿಜೆಪಿಯವರಿಗೆ ನೂತನ ಕುಮಾರಿ ಅವರ ಮೇಲೆ ಅಷ್ಟೊಂದು ಅಭಿಮಾನ ಇದ್ದರೆ ಈ ಮೊದಲೇ ಯಾಕೆ ಅವರಿಗೆ ಶಾಶ್ವತ ಉದ್ಯೋಗ ಕೊಡಲು ಪ್ರಯತ್ನಿಸಿಲ್ಲ. ಅವರು ಇಷ್ಟು ದಿನವೂ ಮಾಡಿದ್ದೆಲ್ಲ ನಾಟಕ ಎಂದು ಇದರಿಂದ ಬಹಿರಂಗವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ನೂತನಕುಮಾರಿ ಅವರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಖಂಡಿತವಾಗಿಯೂ ಬದ್ಧವಾಗಿದೆ. ಈಗಾಗಲೇ ಕಾಂಗ್ರೆಸ್ ಪರವಾಗಿ ನೂತನ ಅವರಲ್ಲಿ ಮಾತುಕತೆ ನಡೆಸಿದ್ದೇವೆ. ಕೂಡಲೇ ಅವರಿಗೆ ಉದ್ಯೋಗ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.