ADVERTISEMENT

ಕಲಾವಿದರಿಗೆ ಮನೋಸ್ಥೈರ್ಯ ತುಂಬಿ: ಸತೀಶ್ ಶೆಟ್ಟಿ ಪಟ್ಲ

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಸಭೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 4:40 IST
Last Updated 4 ಜುಲೈ 2022, 4:40 IST
ಗುರುವಾಯನಕೆರೆಯಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಷನ್ ಸಭೆಯಲ್ಲಿ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿದರು
ಗುರುವಾಯನಕೆರೆಯಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಷನ್ ಸಭೆಯಲ್ಲಿ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿದರು   

ಬೆಳ್ತಂಗಡಿ : ‘ಕಲಾವಿದರಿಗೆ ಮನೋಸ್ಥೈರ್ಯ ತುಂಬುವ ಕೆಲಸಕ್ಕಾಗಿ ಪಟ್ಲ ಫೌಂಡೇಷನ್ ಸ್ಥಾಪಿಸಲಾಗಿದೆ. ಜಾತಿ– ಧರ್ಮಗಳನ್ನು ಮೀರಿ ಕಲಾವಿದರಿಗೆ ಪ್ರೋತ್ಸಾಹ ನೀಡುವ ಕೆಲಸವಾಗಬೇಕು' ಎಂದು ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಹೇಳಿದರು.

ಗುರುವಾಯನಕೆರೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಬೆಳ್ತಂಗಡಿ ಘಟಕದ ಸಭೆಯಲ್ಲಿ ಭಾನುವಾರ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ ಕಲಾವಿದರಿಗಾಗಿ ಒಂದು ತರಬೇತಿ ಕೇಂದ್ರ ಆರಂಭವಾಗಬೇಕು’ ಎಂದರು.

ADVERTISEMENT

ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಮಾತನಾಡಿ, ‘ಕಲೆ ಮತ್ತು ಸಾಹಿತ್ಯದ ಬಗ್ಗೆ ಜನ ಜಾಗೃತಿ ಆಗುತ್ತಿದ್ದಾರೆ. ಕಲಾವಿದರ ಬದುಕಿಗೆ ನ್ಯಾಯ ಒದಗಿಸಬೇಕಾದ ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ. ಪಟ್ಲ ಫೌಂಡೇಷನ್‌ನಿಂದ ಕಲಾವಿದರಲ್ಲಿ ಆತ್ಮವಿಶ್ವಾಸದ ಬದುಕು ನಿರ್ಮಾಣವಾಗುತ್ತಿದೆ’ ಎಂದರು.

ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ದಯಾನಂದ ಯಳಚಿತ್ತಾಯ, ಮಹೇಶ್ ಶೆಟ್ಟಿ ಸಲಹೆ ಸೂಚನೆಗಳನ್ನು ನೀಡಿದರು.

ಬೆಳ್ತಂಗಡಿ ಘಟಕದ ಅಧ್ಯಕ್ಷ ಭುಜಬಲಿ ಧರ್ಮಸ್ಥಳ, ನೂತನ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ನೂತನ ಸಮಿತಿಯ ಕಾರ್ಯದರ್ಶಿ ಶಿತಿಕಂಠ ಭಟ್, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಆದರ್ಶ್ ಜೈನ್ ಇದ್ದರು.

ಘಟಕದ ಸಂಚಾಲಕರಾಗಿದ್ದ ರಘುರಾಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.