ADVERTISEMENT

ಪಾವಂಜೆ ಮೇಳದ ಯಾನಾರಂಭ

27ಕ್ಕೆ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 16:38 IST
Last Updated 24 ನವೆಂಬರ್ 2020, 16:38 IST
ಪಾವಂಜೆ ದೇವಸ್ಥಾನದಲ್ಲಿ ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದರು
ಪಾವಂಜೆ ದೇವಸ್ಥಾನದಲ್ಲಿ ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದರು   

ಮೂಲ್ಕಿ: ಪಾವಂಜೆಯ ನಾಗವೃಜ ಕ್ಷೇತ್ರದ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಮೇಳದ ಯಾನಾರಂಭಕ್ಕೆ ಇದೇ 27ರಂದು ಚಾಲನೆ ದೊರೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್ ತಿಳಿಸಿದರು.

ಕ್ಷೇತ್ರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿವಿಧ ಕಾರ್ಯಕ್ರಮಗಳ ಮೂಲಕ ನೂತನ ಮೇಳದ ಯಾನಾರಂಭಗೊಳ್ಳಲಿದ್ದು, ಸಂಜೆ 6ರಿಂದ ರಾತ್ರಿ 11ರ ವರೆಗೆ ಕಾಲ ಮಿತಿಯಲ್ಲಿ ಪೌರಾಣಿಕ ಪ್ರಸಂಗಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.

ಮೇಳದ ಸಂಚಾಲಕ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ‘ಮುಂದಿನ 6 ತಿಂಗಳ ಪ್ರದರ್ಶನದಲ್ಲಿ 38 ಕಲಾವಿದರು ಭಾಗವಹಿಸುವರು. ಮೇ 25ರವರೆಗೆ ಪ್ರದರ್ಶನಗಳ ಬುಕ್ಕಿಂಗ್ ಆಗಿದೆ. ಉಳಿದ ಪ್ರದರ್ಶನಕ್ಕೆ ದೇವಳದ ಭಕ್ತರು ಅವಕಾಶ ಕೋರಿದ್ದು, ಪತ್ತನಾಜೆಯವರೆಗೆ ಎಲ್ಲ ದಿನಗಳಲ್ಲಿ ಬುಕ್ಕಿಂಗ್ ಆಗಿವೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಾಸರಗೋಡು ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರದರ್ಶನ ನಡೆಯುತ್ತದೆ. ಮಳೆಗಾಲದ ಅವಧಿಯಲ್ಲಿ ದೇವಳದಲ್ಲಿ ಪ್ರದರ್ಶನ ಮುಂದುವರಿಯಲಿದೆ’ ಎಂದು ಅವರು ತಿಳಿಸಿದರು.

ADVERTISEMENT

ದೇವಳದ ಡಾ.ಯಾಜಿ ನಿರಂಜನ ಭಟ್ ಮಾತನಾಡಿ, ವಿವಿಧ ಗಣ್ಯರ ಹಾಗೂ ಕಲಾವಿದರ ಕೂಡುವಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಮಾರಂಭವನ್ನು ಸಂಯೋಜಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.