ಮಂಗಳೂರು: ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಶೀಘ್ರಪಥ -2) ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎಂ. ರಾಧಾಕೃಷ್ಣ ಅವರು 15ವರ್ಷ ಕಠಿಣ ಸಜೆ ಹಾಗೂ ₹ 25 ಸಾವಿರ ದಂಡ ವಿಧಿಸಿದ್ದಾರೆ.
55 ವರ್ಷದ ಅಪರಾಧಿಯು ಮೆಲ್ಕಾರ್ ಹಾಗೂ ಇರಾ ಗ್ರಾಮದಲ್ಲಿ 2018 ರ ಜನವರಿಯಲ್ಲಿ ಅಪ್ರಾಪ್ತ ಮಗಳ ಮೇಕೆ ಅತ್ಯಾಚಾರ ನಡೆಸಿದ್ದರು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವೃತ್ತ ನಿರೀಕ್ಷಕರಾಗಿದ್ದ ಶರಣಗೌಡ ಹಾಗೂ ಟಿ. ಡಿ. ನಾಗರಾಜ್ ಅವರು ಈ ಪ್ರಕರಣ ತನಿಖೆ ನಡೆಸಿದ್ದರು. ಸರ್ಕಾರಿ ವಕೀಲ ವೆಂಕಟರಮಣ ಸ್ವಾಮಿ ಅವರು ಸರ್ಕಾರದ ಪರವಾಗಿ ವಾದಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.