ಮಂಗಳೂರು:ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಗೋ ಕಳವು, ಸಾಗಾಟ ಹಾಗೂ ವಧೆಯನ್ನು ತಡೆಗಟ್ಟುವ ಸಲುವಾಗಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಒಳಗೊಂಡ ‘ಜಾನುವಾರು ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ತಂಡ’ವನ್ನು ರಚಿಸಲಾಗಿದ್ದು, ಇದೇ 5ರಿಂದ ಕಾರ್ಯಾಚರಿಸುತ್ತಿದೆ.
ಅದಕ್ಕಾಗಿ ನಗರ ಸಂಪರ್ಕಿಸುವ 32 ಸ್ಥಳಗಳಲ್ಲಿ ಚೆಕ್ಪೋಸ್ಟ್ ಮೂಲಕ ಪರಿಶೀಲನೆ ಹಾಗೂ ರಾತ್ರಿ ರೌಂಡ್ಸ್ ಚುರುಕುಗೊಳಿಸಲಾಗಿದೆ. ಇದಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರನ್ನು ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ. ಇದರಿಂದ ಒಟ್ಟು 7 ಪ್ರಕರಣ ದಾಖಲಾಗಿದ್ದು, 28 ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು ಕಮಿಷನರ್ ಪ್ರಕಟಣೆ ತಿಳಿಸಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.