ADVERTISEMENT

ಅನಗತ್ಯ ವಾಹನ ಓಡಾಟಕ್ಕೆ ತಡೆ

ರಸ್ತೆಗೆ ಇಳಿದ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 2:23 IST
Last Updated 9 ಜೂನ್ 2021, 2:23 IST
ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಮಂಗಳವಾರ ಕಬಕ ಪೊಲೀಸ್ ತಪಾಸಣಾ ಕೇಂದ್ರದ ಬಳಿ ವಾಹನಗಳ ತಪಾಸಣೆ ನಡೆಸಿದರು (ಎಡಚಿತ್ರ). ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್.ಎಂ. ದರ್ಬೆ ಪೊಲೀಸ್ ತಪಾಸಣಾ ಕೇಂದ್ರದ ಬಳಿ ವಾಹನ ತಪಾಸಣೆ ನಡೆಸಿದರು.
ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಮಂಗಳವಾರ ಕಬಕ ಪೊಲೀಸ್ ತಪಾಸಣಾ ಕೇಂದ್ರದ ಬಳಿ ವಾಹನಗಳ ತಪಾಸಣೆ ನಡೆಸಿದರು (ಎಡಚಿತ್ರ). ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್.ಎಂ. ದರ್ಬೆ ಪೊಲೀಸ್ ತಪಾಸಣಾ ಕೇಂದ್ರದ ಬಳಿ ವಾಹನ ತಪಾಸಣೆ ನಡೆಸಿದರು.   

ಪುತ್ತೂರು: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲೆಯಲ್ಲಿ ಮಾರ್ಗಸೂಚಿ ಬಿಗಿಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರು ಮಂಗಳವಾರ ಪುತ್ತೂರು ನಗರದಲ್ಲಿ ರಸ್ತೆಗಿಳಿದು ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕಿದರು.

ಮಾಣಿ– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಪೊಲೀಸ್ ತಪಾಸಣಾ ಕೇಂದ್ರದ ಬಳಿ ಸಂಚರಿಸುತ್ತಿದ್ದ ವಾಹನ ಗಳ ತಪಾಸಣೆ ಅವರು ನಡೆಸಿದರು. ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯ ತನಕ ವಾಹನ ತಪಾಸಣೆ ನಡೆಸಿದ ಅವರು ಸರಿಯಾದ ಮಾಹಿತಿ ದಾಖಲೆ ಪತ್ರ ನೀಡಿದವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ, ಉಳಿದ ವಾಹನಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಬಿಸಿ ಮುಟ್ಟಿಸಿದರು.

‘ಲಾಕ್‌ಡೌನ್ ನಿಯಮದನ್ವಯ ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಂದಿನ ಒಂದು ವಾರ ನಿರಂತರ ವಾಹನ ತಪಾಸಣೆ ನಡೆಯಲಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಭಾಗದಲ್ಲಿ ದಾಖಲೆ ರಹಿತ ಅನಗತ್ಯ ವಾಹನ ಸಂಚಾರಕ್ಕೆ ದಂಡ ವಿಧಿಸಿ, ವಾಹನ ವಶಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಡಾ.ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.