ADVERTISEMENT

ಧರ್ಮಸ್ಥಳ ಪ್ರಕರಣ: ಇಂದು ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 5:09 IST
Last Updated 23 ಆಗಸ್ಟ್ 2025, 5:09 IST
<div class="paragraphs"><p>ಸಮೀರ್‌ ಎಂ.ಡಿ&nbsp;</p></div>

ಸಮೀರ್‌ ಎಂ.ಡಿ 

   

ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಬಗ್ಗೆ ‘ದೂತ’ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೊ ಪ್ರಸಾರ ಮಾಡಿದ್ದ ಆರೋಪಕ್ಕೆ ಸಂಬಂಧಿಸಿ ಶನಿವಾರ (ಆ.23) ಧರ್ಮಸ್ಥಳ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ವಿಡಿಯೊ ಪ್ರಸಾರ ಕುರಿತು ಜು.12ರಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್‌ಗೆ 3 ಬಾರಿ ನೋಟಿಸ್ ನೀಡಲಾಗಿತ್ತು. ಅವರನ್ನು ಬಂಧಿಸಲು ಬೆಂಗಳೂರಿಗೆ ಧರ್ಮಸ್ಥಳ ಪೊಲೀಸರು ತೆರಳಿದ್ದರು. ಆದರೆ, ಸಮೀರ್ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.