ಸಮೀರ್ ಎಂ.ಡಿ
ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಬಗ್ಗೆ ‘ದೂತ’ ಯೂಟ್ಯೂಬ್ ಚಾನೆಲ್ನಲ್ಲಿ ವಿಡಿಯೊ ಪ್ರಸಾರ ಮಾಡಿದ್ದ ಆರೋಪಕ್ಕೆ ಸಂಬಂಧಿಸಿ ಶನಿವಾರ (ಆ.23) ಧರ್ಮಸ್ಥಳ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ವಿಡಿಯೊ ಪ್ರಸಾರ ಕುರಿತು ಜು.12ರಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್ಗೆ 3 ಬಾರಿ ನೋಟಿಸ್ ನೀಡಲಾಗಿತ್ತು. ಅವರನ್ನು ಬಂಧಿಸಲು ಬೆಂಗಳೂರಿಗೆ ಧರ್ಮಸ್ಥಳ ಪೊಲೀಸರು ತೆರಳಿದ್ದರು. ಆದರೆ, ಸಮೀರ್ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.