ಮಂಗಳೂರು: ಒಬ್ಬಂಟಿ ವೃದ್ಧೆಯ ಚಿನ್ನಾಭರಣ ದೋಚಿದ್ದ ರಿಕ್ಷಾ ಚಾಲಕ ಪ್ರವೀಣ್ನನ್ನು ಬಂಧಿಸಿರುವ ಉರ್ವ ಠಾಣೆ ಪೊಲೀಸರು, ಆರೋಪಿಯಿಂದ ₹4.32 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಚಿಲಿಂಬಿ ಪಂಚಲಿಂಗೇಶ್ವರ ದೇವಸ್ಥಾನ ಬಳಿ ವಾಸವಾಗಿರುವ ವೃದ್ಧೆ ಫಿಲೋಮಿನಾ ಸಲ್ಡಾನ ಅವರಿಗೆ ಸಹಾಯ ಮಾಡುತ್ತಿದ್ದ ರಿಕ್ಷಾ ಚಾಲಕ ಪ್ರವೀಣ್, ಚಿನ್ನಾಭರಣ ಕಳವು ಮಾಡಿದ್ದ. ಈ ಬಗ್ಗೆ ಜೂನ್ 6 ರಂದು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದು, ಫಳ್ನೀರ್ನ ಬ್ಯಾಂಕ್ನಲ್ಲಿ ಅಡಮಾನ ಇರಿಸಿದ್ದ ಹಾಗೂ ಆತನ ವಶದಲ್ಲಿದ್ದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಉರ್ವ ಠಾಣೆ ಇನ್ಸ್ಪೆಕ್ಟರ್ ಮಹಮ್ಮದ್ ಶರೀಫ್, ಸಬ್ ಇನ್ಸ್ಪೆಕ್ಟರ್ ಶ್ರೀಕಲಾ, ಎಎಸ್ಐ ಬಾಲಕೃಷ್ಣ, ಸಿಬ್ಬಂದಿ ಪ್ರಕಾಶ್, ಬಸವರಾಜ ಬಿರಾದಾರ ಅವರ ತಂಡ ಈ ಪ್ರಕರಣ ಭೇದಿಸಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.