ADVERTISEMENT

ನೋಡಿ: ಶಾಲೆ ಆರಂಭಿಸಲು ಒತ್ತಾಯಿಸಿ ಪೋಸ್ಟ್‌ ಕಾರ್ಡ್‌ ಅಭಿಯಾನ, ಶಿಕ್ಷಣ ಸಚಿವರಿಗೆ ಸಾವಿರಾರು ಪತ್ರ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 14:05 IST
Last Updated 8 ಜುಲೈ 2021, 14:05 IST

ಮಂಗಳೂರು: ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೀಘ್ರ ಶಾಲೆ ಆರಂಭಿಸುವಂತೆ ಆಗ್ರಹಿಸಿ ‘ಸರ್ಕಾರಿ ಶಾಲೆ ಉಳಿಸಿ ಬೆಳೆಸಿ’ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟಬಲ್ ಟ್ರಸ್ಟ್ ನೇತೃತ್ವದಲ್ಲಿ ಆರಂಭಿಸಿರುವ ಪೋಸ್ಟ್‌ ಕಾರ್ಡ್ ಅಭಿಯಾನಕ್ಕೆ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ದಡ್ಡಲಕಾಡು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಯಿತು. ಅಭಿಯಾನದ ಅಂಗವಾಗಿ ಒಂದು ಸಾವಿರಕ್ಕಿಂತಲೂ ಅಧಿಕ ಮಂದಿ ಪೋಷಕರು ಸ್ವಯಂಪ್ರೇರಿತರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಕಾರ್ಡ್ ಪೋಸ್ಟ್ ಬರೆಯುವ ಮೂಲಕ ಅಭಿಯಾನದಲ್ಲಿ ಕೈ ಜೋಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.