ADVERTISEMENT

ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ 

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 6:58 IST
Last Updated 29 ಜುಲೈ 2022, 6:58 IST
   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವ ವೇಳೆ ಹೆಜಮಾಡಿ ಚೆಕ್ ಪೋಸ್ಟ್ ಬಳಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಮೋದ್ ಮುತಾಲಿಕ್ ಜಿಲ್ಲೆ ಪ್ರವೇಶಿಸಲು ನಿಷೇಧ ಹೇರಿ ಆದೇಶ ಹೊರಡಿಸಲಾಗಿತ್ತು.

'ಆದೇಶ ಉಲ್ಲಂಘನೆ ಮಾಡಿರುವ ಕಾರಣ ಮುತಾಲಿಕ್ ಅವರನ್ನು ವಶಕ್ಕೆ ಪಡೆಯಲಾಗಿದೆ' ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.