ADVERTISEMENT

ಪತ್ರಕರ್ತರ ಸಂಘದ ಕಟ್ಟಡ ಉದ್ಘಾಟನೆ 30ರಂದು

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 13:52 IST
Last Updated 23 ನವೆಂಬರ್ 2022, 13:52 IST

ಮಂಗಳೂರು: ಸುಳ್ಯ ‍ಪತ್ರಕರ್ತರ ಸಂಘವು ಅಂಬಟಟ್ಕದಲ್ಲಿ ನಿರ್ಮಿಸಿರುವ ಸಮುದಾಯ ಭವನದ ನೆಲ ಅಂತಸ್ತಿನ ಉದ್ಘಾಟನೆ ಇದೇ 30ರಂದು ನಡೆಯಲಿದೆ ಎಂದು ಅಧ್ಯಕ್ಷ ಹರೀಶ್ ಬಂಟ್ವಾಳ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಶ್ರೀ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಸಚಿವ ಎಸ್‌.ಅಂಗಾರ ಕಟ್ಟಡ ಉದ್ಘಾಟಿಸಲಿದ್ದು ಸಚಿವ ವಿ.ಸುನಿಲ್ ಕುಮಾರ್‌, ಸಂಸದರಾದ ನಳಿನ್ ಕುಮಾರ್ ಕಟೀಲ್‌, ಸದಾನಂದ ಗೌಡ, ಶಾಸಕ ಯು.ಟಿ.ಖಾದರ್‌ ಹಾಗೂ ಕೆ.ಹರೀಶ್ ಕುಮಾರ್ ಪಾಲ್ಗೊಳ್ಳುವರು ಎಂದು ಅವರು ತಿಳಿಸಿದರು.

ಬೆಳಿಗ್ಗೆ 9.30ರಿಂದ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಶಾಸ್ತ್ರೀಯ ಗಾಯನ ಮತ್ತು ಮಧ್ಯಾಹ್ನ 1 ಗಂಟೆಗೆ ಶಶಿಧರ್ ಕೋಟೆ ಸಂಗೀತ ಸುಧೆ ಇರುತ್ತದೆ ಎಂದ ಅವರು ಮೂರು ಅಂತಸ್ತಿನ ಕಟ್ಟಡದ ಮೊದಲ ಅಂತಸ್ತನ್ನು ಸಾರ್ವಜನಿಕರ ನೆರವಿನಿಂದ ನಿರ್ಮಿಸಲಾಗಿದೆ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.