ADVERTISEMENT

ಪ್ರೊ.ಅಮೃತ ಸೋಮೇಶ್ವರರಿಗೆ 2020ರ ಡಾ.ಶಿವರಾಮ ಕಾರಂತ ಬಾಲವನ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 7:02 IST
Last Updated 6 ಅಕ್ಟೋಬರ್ 2020, 7:02 IST
ಪ್ರೊ.ಅಮೃತ ಸೋಮೇಶ್ವರ
ಪ್ರೊ.ಅಮೃತ ಸೋಮೇಶ್ವರ   

ಮಂಗಳೂರು: ಪುತ್ತೂರಿನ ಶಿವರಾಮ ಕಾರಂತ ಬಾಲವನ ಕೊಡಮಾಡುವ 2020ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ, ಸಂಶೋಧಕ, ಪ್ರಸಂಗಕರ್ತ ಪ್ರೊ.ಅಮೃತ ಸೋಮೇಶ್ವರ ಅವರು ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 10ರಂದು ಮಧ್ಯಾಹ್ನ ಬಾಲವನದಲ್ಲಿ ನಡೆಯುವ ಡಾ.ಶಿವರಾಮ ಕಾರಂತರ ಜನ್ಮ ದಿನಾಚರಣೆಯಲ್ಲಿ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಸೋಮೇಶ್ವರ ಅವರಿಗೆ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ₹25 ಸಾವಿರ ನಗದು, ಫಲಕ, ಪ್ರಮಾಣ ಪತ್ರ, ಶಾಲು, ಹಾರಗಳನ್ನು ಒಳಗೊಂಡಿದೆ ಎಂದು ಪುತ್ತೂರು ಬಾಲವನದ ಆಡಳಿತಾಧಿಕಾರಿ ಡಾ.ಸುಂದರ ಕೇನಾಜೆ ತಿಳಿಸಿದ್ದಾರೆ.

ಸುಳ್ಯದ ಕುರುಂಜಿ ವೆಂಕಟರಮಣ ಗೌಡ ದತ್ತಿನಿಧಿ ಮೂಲಕ ಬಾಲವನವು ಕಾರಂತರ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.