ADVERTISEMENT

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಗ್ರಾಪಂ ಸದಸ್ಯತ್ವ ರದ್ದು

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 18:00 IST
Last Updated 26 ಆಗಸ್ಟ್ 2025, 18:00 IST

ಸುಳ್ಯ (ದಕ್ಷಿಣ ಕನ್ನಡ): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಬೆಳ್ಳಾರೆ ಗ್ರಾಮ ಪಂಚಾಯಿತಿ 1ನೇ ವಾರ್ಡ್‌ನ ಸದಸ್ಯ ಕೆ.ಮಹಮ್ಮದ್ ಇಕ್ಬಾಲ್ ಅವರ ಸದಸ್ಯತ್ವ ರದ್ದಾಗಿದೆ.

ಅವರು 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸಿರಲಿಲ್ಲ. ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ತೆಗೆದುಹಾಕಿದ್ದು, ಅವರ ಸದಸ್ಯ ಸ್ಥಾನವು ಖಾಲಿ ಎಂದು ಘೋಷಿಸಲಾಗಿದೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಕೆ.ಮಹಮ್ಮದ್ ಇಕ್ಬಾಲ್, ಜೈಲಿನಲ್ಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.