ADVERTISEMENT

ಪಬ್ ಮೇಲೆ‌ ದಾಳಿ: ವಿದ್ಯಾರ್ಥಿಗಳ ವಿದಾಯಕೂಟಕ್ಕೆ ಬಜರಂಗ ದಳದಿಂದ‌ ಅಡ್ಡಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2022, 18:06 IST
Last Updated 25 ಜುಲೈ 2022, 18:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ನಗರದ ಪಬ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಸೇರಿ ವಿದಾಯಕೂಟ ಆಚರಿಸುತ್ತಿದ್ದ ಸಂದರ್ಭದಲ್ಲಿ ಬಜರಂಗ ದಳದ ಕಾರ್ಯಕರ್ತರು ಸೋಮವಾರ ರಾತ್ರಿ ಅಲ್ಲಿಗೆ ತೆರಳಿ ದಾಂದಲೆ ನಡೆಸಿದ್ದಾರೆ.

ಸಂತೋಷ ಕೂಟವನ್ನು ಸ್ಥಗಿತಗೊಳಿಸಿ ಹೊರ ನಡೆಯಿರಿ ಎಂದು ವಿದ್ಯಾರ್ಥಿಗಳನ್ನು ಬಲವಂತಪಡಿಸಿದ್ದಾರೆ.

ಅಷ್ಟರಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಬಂದ‌ ಪೊಲೀಸರು ಬಜರಂಗದಳದ ಕಾರ್ಯಕರ್ತರನ್ನು ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.
ಈ ಅನಿರೀಕ್ಷಿತ ಬೆಳವಣಿಗೆಯಿಂದ ವಿಚಲಿತರಾದ ವಿದ್ಯಾರ್ಥಿಗಳು ವಿದಾಯಕೂಟವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT

ಈ ವಿದಾಯಕೂಟದಲ್ಲಿ ಹುಡುಗರು ಹಾಗೂ ಹುಡುಗಿಯರು ಒಟ್ಟಿಗೆ ಭಾಗವಹಿಸಿದ್ದು ಬಜರಂಗದಳದವರ ಕಣ್ಣು ಕೆಂಪಗಾಗಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.