ADVERTISEMENT

ಪುದುಚೇರಿ ಮಾಜಿ ಸಿಎಂ ನಾರಾಯಣ ಸ್ವಾಮಿ ಮಂಗಳೂರಿಗೆ ಭೇಟಿ

ಆಸ್ಕರ್‌ ಫರ್ನಾಂಡಿಸ್‌ ಆರೋಗ್ಯ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 1:07 IST
Last Updated 7 ಆಗಸ್ಟ್ 2021, 1:07 IST
ಆಸ್ಕರ್‌ ಫರ್ನಾಂಡಿಸ್‌ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಯೇನೆಪೋಯ ಆಸ್ಪತ್ರೆಗೆ ಪುದುಚೇರಿ ಮಾಜಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಭೇಟಿ ನೀಡಿದರು.
ಆಸ್ಕರ್‌ ಫರ್ನಾಂಡಿಸ್‌ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಯೇನೆಪೋಯ ಆಸ್ಪತ್ರೆಗೆ ಪುದುಚೇರಿ ಮಾಜಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಭೇಟಿ ನೀಡಿದರು.   

ಮಂಗಳೂರು: ನಗರದ ಯೇನೆಪೋಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್‌ ಮುಖಂಡ ಆಸ್ಕರ್‌ ಫರ್ನಾಂಡಿಸ್‌ ಅವರ ಆರೋಗ್ಯ ವಿಚಾರಿಸಲು ಪುದುಚೇರಿಯ ಮಾಜಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಆಸ್ಕರ್ ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಅವರು, ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಒಂದು ವಾರದಿಂದ ಆಸ್ಕರ್ ಫರ್ನಾಂಡಿಸ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಬಹುತೇಕ ಸಹಜ ಉಸಿರಾಟ ನಡೆಸುವಷ್ಟು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕುಟುಂಬ ಸ್ಥರ ಧ್ವನಿಯನ್ನು ಗ್ರಹಿಸಿ ಅದಕ್ಕೆ ತಲೆ, ಕೈ-ಕಾಲು ಆಡಿಸುವ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ADVERTISEMENT

ಪ್ರಜ್ಞೆ ಬರಲು ಇನ್ನೂ ಕೆಲದಿನ ಕಾಯಲಾಗುತ್ತಿದೆ. ವಾರಕ್ಕೆ ಮೂರು ಬಾರಿ ಆಸ್ಕರ್ ಅವರಿಗೆ ಡಯಾಲಿಸಿಸ್ ನಡೆಸಲಾಗುತ್ತಿದ್ದು, ಗುರುವಾರವೂ ಡಯಾಲಿಸಿಸ್ ಮಾಡಲಾಗಿದೆ. ರಕ್ತದೊತ್ತಡದಲ್ಲಿ ಏರಿಳಿತ ಕಂಡುಬಂದಿದ್ದರೂ ಪುನಃ ಸಹಜ ಸ್ಥಿತಿಗೆ ಬಂದಿದೆ. ಸಕ್ಕರೆ ಅಂಶವೂ ಸಹಜವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.