ADVERTISEMENT

ಗೆಜ್ಜೆಗಿರಿ ಕ್ಷೇತ್ರ: ಪ್ರವೀಣ್ ನೆಟ್ಟಾರುಗೆ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 2:49 IST
Last Updated 2 ಆಗಸ್ಟ್ 2022, 2:49 IST
ಗೆಜ್ಜೆಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನ್ ಬಿತ್ತಿಲ್‌ನಲ್ಲಿ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ಕ್ಷೇತ್ರದ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಭಾನುವಾರ ನಡೆಯಿತು
ಗೆಜ್ಜೆಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನ್ ಬಿತ್ತಿಲ್‌ನಲ್ಲಿ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ಕ್ಷೇತ್ರದ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಭಾನುವಾರ ನಡೆಯಿತು   

ಪುತ್ತೂರು: ಗೆಜ್ಜೆಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನ್ ಬಿತ್ತಿಲ್‌ನಲ್ಲಿ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ಕ್ಷೇತ್ರದ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಭಾನುವಾರ ನಡೆಯಿತು.

ಆರ್ಯ ಈಡಿಗ ಸಂಸ್ಥಾನ ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ, ಪ್ರವೀಣ ನೆಟ್ಟಾರು ಅನೇಕ ಸಂಘ ಸಂಸ್ಥೆ ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕ ಕೆಲಸ-ಕಾರ್ಯಗಳ ಮಾಡುತ್ತಿದ್ದರು ಎಂದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪಿತಾಂಬರ ಹೇರಾಜೆ ಮಾತನಾಡಿ, ಪ್ರವೀಣ್ ಎಲ್ಲರೊಂದಿಗೆ ಬೆರೆತು ಯುವ ಜನರನ್ನು ಸಂಘಟಿಸುವ ಕೆಲಸವನ್ನು ಮಾಡುತ್ತಿದ್ದರು. ಅವರ ಅಗಲುವಿಕೆಯು ಸಮಾಜಕ್ಕೆ ನಷ್ಟವಾಗಿದೆ ಎಂದರು.

ADVERTISEMENT

ಸಮಿತಿ ಗೌರವಾಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್ ಮತ್ತು ಜಯಂತ್ ನಡುಬೈಲು, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಕಾರ್ಯದರ್ಶಿ ಚಂದ್ರಹಾಸ ಉಚ್ಚಿಲ್, ಜನಾರ್ದನ ಪೂಜಾರಿ ಪಡುಮಲೆ, ಗೋಪಿನಾಥ್ ಬಗಂಬಿಲ, ಗಣೇಶ್ ಗಂಜಿಮಠ, ಧನಂಜಯ ಮಟ್ಟು, ಸದಾನಂದ ಪೂಜಾರಿ ಬರಿಮಾರ್, ದೀಪಕ್ ಸಜಿಪ, ಪುರುಷೋತ್ತಮ ಕುಪ್ಪೆಪದವು, ಶಶಿಧರ್ ಕಿನ್ನಿಮಜಲು, ಭಾಸ್ಕರ ಸಾಲಿಯಾನ್ ಮುಂಬೈ, ಸೂರ್ಯಕಾಂತ ಸುವರ್ಣ ಮುಂಬೈ, ಚಂದ್ರಕಾಂತ ಶಾಂತಿವನ, ನಾರಾಯಣ ಮಚ್ಚಿನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.