ಪುತ್ತೂರು: ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿದ ಗಾಳಿ–ಮಳೆಯಿಂದಾಗಿ ಕೋಳಿ ಸಾಕಾಣಿಕೆ ಕಟ್ಟಡ (ಕೋಳಿ ಫಾರಂ ಕಟ್ಟಡ) ಕುಸಿದು ಸುಮಾರು 5 ಸಾವಿರ ಕೋಳಿ ಮರಿಗಳು ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲಾಜೆ ಎಂಬಲ್ಲಿ ನಡೆದಿದೆ.
ಕೊಲ್ಲಾಜೆ ನಿವಾಸಿ ರಾಜಮೋಹನ್ ರೈ ಎಂಬುವರಿಗೆ ಸೇರಿದ ಕೋಳಿ ಸಾಕಾಣಿಕೆ ಕಟ್ಟಡ ಗುರುವಾರ ಸಂಜೆ ಕುಸಿದಿದ್ದು, ಘಟನೆಯಿಂದಾಗಿ ಸುಮಾರು ₹ 15ಲಕ್ಷದಷ್ಟು ನಷ್ಟ ಉಂಟಾಗಿದೆ ಎಂದು ರಾಜ್ಮೋಹನ್ ರೈ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಿಯಡ್ಕ ಗ್ರಾಮ ಆಡಳಿತಾಧಿಕಾರಿ ಗೋಪಿಲಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.