ಮಂಗಳೂರು: ಲೋಕೋಪಯೋಗಿ ಇಲಾಖೆಯ ಸಚಿವ ಸಿ.ಸಿ. ಪಾಟೀಲ ಅವರು ಇದೇ 27ರಂದು ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 11.30ಕ್ಕೆ ವಿಮಾನದಲ್ಲಿ ಮಂಗಳೂರಿಗೆ ಬರುವ ಅವರು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30 ರಿಂದ 5.30ರವರೆಗೆ ಮೂಲ್ಕಿ ಹಾಗೂ ಮೂಡಬಿದಿರೆ ತಾಲ್ಲೂಕುಗಳ ಆಡಳಿತ ಸೌಧ, ಮೂಲ್ಕಿ ಪ್ರವಾಸಿ ಮಂದಿರವೂ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಂಜೆ 6.50ಕ್ಕೆ ಮಂಗಳೂರಿನಿಂದ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.