ಉಳ್ಳಾಲ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಟ್ಟಡ ಕುಸಿದುಬಿದ್ದಿದೆ. ಕಿನ್ಯಾ ಬೆಳರಿಂಗೆ ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದುಬಿದ್ದಿದೆ. ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ.
ಹಳೇ ಕಟ್ಟಡ ಕೆಡವಲು ಗ್ರಾಮ ಪಂಚಾಯಿತಿಯಿಂದ ಶಿಕ್ಷಣ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಅನುಮತಿ ನೀಡದ್ದರಿಂದ ಕಟ್ಟಡ ಕೆಡವಲು ಸಾಧ್ಯವಾಗಿಲ್ಲ ಎಂದು ಗ್ರಾ.ಪಂ. ಸದಸ್ಯ ಸಿರಾಜ್ ಕಿನ್ಯಾ ತಿಳಿಸಿದ್ದಾರೆ.
ಮೋಡ ಕವಿದ ವಾತಾವರಣ:
ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರವೂ ಮಳೆ ಮುಂದುವರಿದಿದೆ. ಬೆಳಿಗ್ಗೆಯಿಂದ ತುಂತುರು ಮಳೆಯಾಗುತ್ತಿದೆ. ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಮಳೆ ಶುರುವಾಗುವ ಸಾಧ್ಯತೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.