ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರವೂ ಗಾಳಿ, ಮಳೆ ಬಿರುಸು ಪಡೆದುಕೊಂಡಿದೆ. ಜು.27 ವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯಲ್ಲಿ ಒಂದು ಹೆಂಚಿನ ಮನೆಗೆ ಹಾನಿಯಾಗಿದ್ದು, ಬಾವಿ ಕುಸಿದಿದೆ. ಮೊಗ್ರಾಲ್ ನದಿ, ಕಾರ್ಯಂಗೋಡು ನದಿ, ಮಧುವಾಹಿನಿ ನದಿ, ನೀಲೇಶ್ವರ ನದಿ, ಭೀಮನಡಿ ನದಿ, ಚಾಯೋಂ ನದಿಗಳಲ್ಲಿ ನೀರಿನ ಮಟ್ಟ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದೆ. ಸ್ಥಳೀಯ ನಿವಾಸಿಗಳು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.