ADVERTISEMENT

ಬಾವಿಗೆ ಬಿದ್ದ ಬೆಕ್ಕು ರಕ್ಷಿಸಿದ ರಜನಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 16:35 IST
Last Updated 1 ಡಿಸೆಂಬರ್ 2020, 16:35 IST
ಬಾವಿಗೆ ಇಳಿದಿದ್ದ ರಜಿನಿ ಶೆಟ್ಟಿ
ಬಾವಿಗೆ ಇಳಿದಿದ್ದ ರಜಿನಿ ಶೆಟ್ಟಿ   

ಮಂಗಳೂರು: ಇಲ್ಲಿನ ಬಳ್ಳಾಲ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರು 30 ಅಡಿ ಆಳದ ಬಾವಿಗೆ ಇಳಿದು, ಜೀವದ ಹಂಗನ್ನು ತೊರೆದು ಬೆಕ್ಕನ್ನು ರಕ್ಷಿಸಿದ್ದಾರೆ.

ನಗರದ ದೇರೇಬೈಲ್‌ ಕೊಂಚಾಡಿಯಲ್ಲಿ 30 ಅಡಿ ಆಳದ ಹಳೆಯ ಬಾವಿ ಬಹುತೇಕ ಕುಸಿದು ಗುಹೆಯಂತಾಗಿದ್ದು, ಈ ಬಾವಿಗೆ ಈಚೆಗೆ ಬೆಕ್ಕೊಂದು ಬಿದ್ದು ಬಾವಿಯ ಮಧ್ಯದಲ್ಲಿ ಕುಸಿದು ಉಂಟಾದ ತಡೆಯಲ್ಲಿ ಸಿಲುಕಿ ಹಾಕಿಕೊಂಡಿತ್ತು. ಒಂದು ದಿನವಿಡೀ ಆಹಾರವಿಲ್ಲದೆ ಬಾವಿಯಲ್ಲೇ ಉಳಿದಿತ್ತು.

ಬೆಕ್ಕಿನ ರಕ್ಷಣೆ ಮಾಡಲು ಯಾರಿಂದಲೂ ಸಾಧ್ಯವಾಗದಿದ್ದಾಗ ರಜನಿ ಶೆಟ್ಟಿ ಅವರನ್ನು ಸ್ಥಳೀಯರು ಸಂಪರ್ಕಿಸಿದ್ದರು. ಪ್ರಾಣಿ ಪ್ರೇಮಿಯಾದ ರಜನಿ ಶೆಟ್ಟಿ ಅವರು ಸ್ಥಳೀಯರ ಸಹಕಾರದಿಂದ ಹಗ್ಗದ ಸಹಾಯದೊಂದಿಗೆ ಬಾವಿಗೆ ಇಳಿದು ಬೆಕ್ಕನ್ನು ರಕ್ಷಣೆ ಮಾಡಿದ್ದಾರೆ. ಹಿಂದೆಯೂ ಇವರು ಬಾವಿಗೆ ಬಿದ್ದಿದ್ದ ನಾಯಿಯೊಂದನ್ನು ರಕ್ಷಿಸಿದ್ದ ವಿಡಿಯೊ ವೈರಲ್‌ ಆಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.