
ಪ್ರಜಾವಾಣಿ ವಾರ್ತೆ
ಮಂಗಳೂರು: ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿಯಲ್ಲಿ ಧಮ್ಕಿ ಹಾಕಿದ ಆರೋಪದ ಮೇಲೆ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಗುರುವಾರ ಮಂಗಳೂರಿಗೆ ಕರೆತಂದ ಪೊಲೀಸರು ಸ್ಥಳ ಮಹಜರು ನಡೆಸಿದರು.
ತಲೆ ಮರೆಸಿಕೊಂಡಿದ್ದ ವೇಳೆ ಕೆಲ ದಿನ ತಂಗಿದ್ದ ಮಂಗಳೂರಿನ ಮೈಕೆಲ್ ಎಂಬುವವರ ಪಚ್ಚನಾಡಿಯ ಫಾರ್ಮ್ಹೌಸ್ನಲ್ಲಿ ಸ್ಥಳ ಮಹಜರು ನಡೆಯಿತು. ಶಿಡ್ಲಘಟ್ಟ ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್ ನೇತೃತ್ವದಲ್ಲಿ ಪೊಲೀಸರು, ಆರೋಪಿಯನ್ನು ಮಂಗಳೂರಿಗೆ ಕರೆತಂದಿದ್ದರು.
‘ಕಲ್ಟ್’ ಸಿನಿಮಾ ಬ್ಯಾನರ್ ತೆರವುಗೊಳಿಸಿದ ಶಿಡ್ಲಘಟ್ಟದ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿ, ಜೀವ ಬೆದರಿಕೆಯೊಡ್ದಿದ ಆರೋಪದ ಮೇಲೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಿಸಿ, ಜ.26ರಂದು ಕೇರಳದಲ್ಲಿ ಬಂಧಿಸಲಾಗಿತ್ತು.