ADVERTISEMENT

4 ಜಿಲ್ಲೆಗಳಲ್ಲಿ ಇಂದಿನಿಂದ (ಏ.24) ರಂಜಾನ್ ಉಪವಾಸ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 20:59 IST
Last Updated 23 ಏಪ್ರಿಲ್ 2020, 20:59 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಗಳೂರು: ರಂಜಾನ್‌ ಮಾಸದ ಪ್ರಥಮ ಚಂದ್ರ ದರ್ಶನವು ಗುರುವಾರ ಕೇರಳದ ಕಲ್ಲಿಕೋಟೆಯ ಕಾಪಾಡ್‍ನಲ್ಲಿ ಆಗಿರುವುದರಿಂದ ಶುಕ್ರವಾರದಿಂದ ದಕ್ಷಿಣ ಕನ್ನಡ, ಉಡುಪಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶುಕ್ರವಾರದಿಂದ (ಏ.23) ರಂಜಾನ್‌ ಉಪವಾಸ ಆಚರಿಸಲು ಉಡುಪಿ ಸಂಯುಕ್ತ ಖಾಝಿ ಅಲ್‍ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಮತ್ತುದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‍ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷ ಪಿ. ಅಬೂಬಕ್ಕರ್ ನೇಜಾರು ಮತ್ತು ಕಾರ್ಯದರ್ಶಿ ಎಂ. ಎ. ಬಾವು ಮೂಳೂರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರು ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಶನಿವಾರದಿಂದ ರಂಜಾನ್ ಉಪವಾಸ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT