ADVERTISEMENT

ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ವನಜ ರಂಗಮನೆ ಪ್ರಶಸ್ತಿ-2020

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 13:28 IST
Last Updated 9 ಆಗಸ್ಟ್ 2020, 13:28 IST

ಮಂಗಳೂರು: ಇಲ್ಲಿನ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ವತಿಯಿಂದ ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ತಾಯಿ ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 7ನೇ ವರ್ಷದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷಗಾನದ ಹಿರಿಯ ಅರ್ಥದಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯನ್ನು ಇದೇ 28 ರಂದು ಅವರು ವಾಸವಿರುವ ಬೆಳ್ತಂಗಡಿ ತಾಲ್ಲೂಕಿನ ಕನ್ನಡಿಕಟ್ಟೆ ಮನೆಯಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಯಕ್ಷ ಸ್ಮರಣಿಕೆ, ಪ್ರಶಸ್ತಿ ಫಲಕ ಹಾಗೂ ₹10 ಸಾವಿರ ನಗದು ಒಳಗೊಂಡಿದೆ ಎಂದು ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT