ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಚೆಸ್ ಅಸೋಸಿಯೇಶನ್ ಭಾನುವಾರ ನಗರದ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ 2ನೇ ಅಂತರ ಜಿಲ್ಲಾ ಮುಕ್ತ ರ್ಯಾಪಿಡ್ ಚೆಸ್ ಪಂದ್ಯಾವಳಿಯಮುಕ್ತ ವಿಭಾಗದಲ್ಲಿ ಪ್ರಶಾಂತ್ ಜೆ ನಾಯ್ಕ್ ವಿಜೇತರಾದರು.
ಪ್ರಜ್ವಲ್ ಪಿ. ದ್ವಿತೀಯ ಹಾಗೂ ಶ್ರೀಯಾನ್ ಎಸ್.ಮಲ್ಯ ಹಾಗೂ ರವೀಶ್ ಕೋಟೆ ನಂತರದ ಸ್ಥಾನ ಪಡೆದರು. ವಿವಿಧ ವಯೋಮಿತಿ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಸುಮಾರು 160ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.
ಶಾರದಾ ಸಮೂಹ ವಿದ್ಯಾಲಯದ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಕೆಐಒಸಿಎಲ್ ಹಿರಿಯ ಪ್ರಬಂಧಕ ಮುರುಗೇಶ್ ಎಸ್. ಮುಖ್ಯ ಅತಿಥಿಯಾಗಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎ.ಬಿ.ಶೆಟ್ಟಿ ಡೆಂಟಲ್ ಸೈನ್ಸ್ಅಸೋಸಿಯೇಟ್ ಡೀನ್ ಡಾ.ಅಮರಶ್ರೀ ಅಮರನಾಥ್ ಶೆಟ್ಟಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಳದ ಕೋಶಾಧಿಕಾರಿ ಪದ್ಮರಾಜ ಆರ್. ಮುಖ್ಯ ಅತಿಥಿಯಾಗಿದ್ದರು.
ಚೆಸ್ ಅಸೋಸಿಯೇಶನ್ನ ಅಧ್ಯಕ್ಷ ರಮೇಶ್ ಕೋಟೆ ಅಧ್ಯಕ್ಷತೆ ವಹಿಸಿದ್ದರು. ಅಸೋಸಿಯೇಶನ್ ಕಾರ್ಯದರ್ಶಿ ಅಭಿಷೇಕ್ ಕಟ್ಟೆಮಾರ್, ಕೋಶಾಧಿಕಾರಿ ಪೂರ್ಣಿಮಾ ಎಸ್.ಆಳ್ವ, ಉಪಾಧ್ಯಕ್ಷರಾದ ವಿ.ಪಿ.ಆಶೀರ್ವಾದ್, ಸಂದೀಪ್ ಕುಮಾರ್, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ್ ಕೆ., ಜೊತೆ ಕೋಶಾಧಿಕಾರಿ ಅಡಾಲ್ಫ್ ಲೋಬೊ ಇದ್ದರು.ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.