ADVERTISEMENT

ತನಿಖೆ ನಂತರ ಶ್ರೀಲತಾ ವಿರುದ್ಧ ಕ್ರಮ: ಎನ್. ಶಶಿಕುಮಾರ್

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 4:18 IST
Last Updated 18 ಏಪ್ರಿಲ್ 2021, 4:18 IST

ಮಂಗಳೂರು: ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಗರವಳ್ಳಿಯ ಏ.10ರಂದು ರಾತ್ರಿ ನಡೆದ ರೇವ್‌ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ನಗರ ಎಕನಾಮಿಕ್ ಆಂಡ್ ನಾರ್ಕೊಟಿಕ್ ಕ್ರೈಂ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಶ್ರೀಲತಾ ಅವರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್‌ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಶ್ರೀಲತಾ ತಮ್ಮನ್ನು ಸಿಸಿಬಿ ಅಧಿಕಾರಿ ಎಂದು ಅಲ್ಲಿ ಪರಿಚಯಿಸಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಹುದ್ದೆಯನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದರು.

ಘಟನೆಯಲ್ಲಿ ಶ್ರೀಲತಾರ ಪಾತ್ರದ ಬಗ್ಗೆ ಹಿರಿಯ ಅಧಿಕಾರಿಯಿಂದ ಸಮಗ್ರ ತನಿಖೆ ನಡೆಸಲಾಗುವುದು. ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.