ADVERTISEMENT

ಪುತ್ತೂರು: ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

ನಗರಸಭೆಯ ಆಡಳಿತದ 2 ವರ್ಷದ ಅವಧಿಯಲ್ಲಿ ₹ 180 ಕೋಟಿ ಮೊತ್ತದ ಯೋಜನೆ ಕಾರ್ಯಗತ: ನಳಿನ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2022, 6:51 IST
Last Updated 5 ನವೆಂಬರ್ 2022, 6:51 IST
ಹಾರಾಡಿಯಿಂದ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಮತ್ತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಗುದ್ದಲಿಪೂಜೆ ನೆರವೇರಿಸಿದರು
ಹಾರಾಡಿಯಿಂದ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಮತ್ತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಗುದ್ದಲಿಪೂಜೆ ನೆರವೇರಿಸಿದರು   

ಪುತ್ತೂರು: ‘ನಗರಸಭೆ ಆಡಳಿತದ ಎರಡು ವರ್ಷದ ಅವಧಿಯಲ್ಲಿ ₹180 ಕೋಟಿ ಮೊತ್ತದ ಯೋಜನೆಗಳು ಕಾರ್ಯಗತಗೊಂಡಿವೆ. ಹಾರಾಡಿಯಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಂಕ್ರಿಟೀಕರಣ ಕಾರ್ಯ ಈಗ ನಡೆದಿದೆ’ ಎಂದು ಸಂಸದ ನಳಿನ್‌ ಕುಮಾರ್ ಕಟೀಲ್‌ ಹೇಳಿದರು.

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿಯಿಂದ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ₹ 1.56 ಕೋಟಿ ವೆಚ್ಚದ ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು, ‘ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ₹1075 ಕೋಟಿ ಮೊತ್ತದ ಕಾಮಗಾರಿಗಳು ಆಗುತ್ತಿವೆ. ಹೀಗಿದ್ದರೂ ಕೆಲವರು ‘ಸಂಜೀವ ಮಠಂದೂರು ಬಿಲ್ಡಪ್ ಕೊಡುತ್ತಿದ್ದಾರೆ’ ಎಂದು ಟೀಕಿಸುತ್ತಾರೆ’ ಎಂದು ಹೇಳಿದರು.

ADVERTISEMENT

ಪುತ್ತೂರು ನಗರಸಭೆಯ ಅಧ್ಯಕ್ಷ ಕೆ.ಜೀವಂಧರ್ ಜೈನ್ ಮಾತನಾಡಿ, ‘2 ವರ್ಷಗಳಲ್ಲಿ ₹180 ಕೋಟಿ ಮೊತ್ತದ ಯೋಜನೆಗಳು ಕಾರ್ಯಗತಗೊಂಡಿವೆ. ನಗರಸಭೆ ವ್ಯಾಪ್ತಿಯಲ್ಲಿ ₹70 ಲಕ್ಷ ವೆಚ್ಚದಲ್ಲಿ 11 ಪಾರ್ಕ್‌ಗಳನ್ನು ನಿರ್ಮಿಸಲಾಗಿದೆ’ ಎಂದರು.

ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭೆಯ ಸದಸ್ಯ ಪದ್ಮನಾಭ ನಾಯ್ಕ್ ಪಡೀಲ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ. ತೀರ್ತಾರಾಮ ಇದ್ದರು. ಪೌರಾಯುಕ್ತ ಮಧು ಎಸ್. ಮನೋಹರ್ ಸ್ವಾಗತಿಸಿದರು. ನಗರಸಭೆಯ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.