ADVERTISEMENT

ನಟ ಯಶ್ ಧರ್ಮಸ್ಥಳಕ್ಕೆ ಭೇಟಿ:  ಕೆ.ಜಿ.ಎಫ್ 2 ಯಶಸ್ಸಿಗಾಗಿ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 12:58 IST
Last Updated 10 ಏಪ್ರಿಲ್ 2022, 12:58 IST
 ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಚಿತ್ರ ನಟ ಯಶ್ ಅವರನ್ನು ಗೌರವಿಸಿದರು.
 ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಚಿತ್ರ ನಟ ಯಶ್ ಅವರನ್ನು ಗೌರವಿಸಿದರು.   

ಉಜಿರೆ: ಚಿತ್ರನಟ ಯಶ್ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ಅವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಅಲ್ಲಿಂದ ‘ಮಣ್ಣಿನ ಹರಕೆ’ಯ ಕ್ಷೇತ್ರವೆಂದೇ ಪ್ರಸಿದ್ಧಿಯಾದ ಸುರ್ಯ ದೇವಸ್ಥಾನಕ್ಕೂ ಭೇಟಿ ನೀಡಿ, ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದರು.

ADVERTISEMENT

ಕೆ.ಜಿ.ಎಫ್.2 ಚಿತ್ರ ಇದೇ 14ರಂದು ಬಿಡುಗಡೆಯಾಗಲಿದ್ದು, ಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲು ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಯಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.