ಮಂಗಳೂರು: ಬೊಕ್ಕಪಟ್ಣದ ರೌಡಿ ಶೀಟರ್ ಇಂದ್ರಜಿತ್ (45) ಎಂಬಾತನ ಶವವು ಬರ್ಬರವಾಗಿ ಹತ್ಯೆಗೈದು ಎಸೆದ ಸ್ಥಿತಿಯಲ್ಲಿ ಗುರುವಾರ ನಸುಕಿನ ಜಾವ ನಗರದ ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ಬಳಿ ಪತ್ತೆಯಾಗಿದೆ.
ಆತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದ. ಬುಧವಾರ ತಡರಾತ್ರಿಯಿಂದ ಗುರುವಾರ ನಸುಕಿನ ಜಾವದೊಳಗೆ ಈ ಘಟನೆ ನಡೆದಿರುವ ಶಂಕೆ ಇದೆ.
ಮಾರಕ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿ ಗಾರ್ಡನ್ ಬಳಿ ಎಸೆಯಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಬರ್ಕೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.