ಮಂಗಳೂರು: ಆರ್ಎಸ್ಎಸ್ ಬಗ್ಗೆ ಸತ್ಯಾಂಶ ಗೊತ್ತಿಲ್ಲದವರು ಟೀಕೆ ಮಾಡುತ್ತಾರೆ. ಇದರಿಂದ ಆರ್ಎಸ್ಎಸ್ಗೆ ಏನೂ ಹಾನಿ ಇಲ್ಲ ಎಂದು ಮೀನುಗಾರಿಕಾ ಸಚಿವ ಎಸ್. ಅಂಗಾರ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರ್ಎಸ್ಎಸ್ ಬಗ್ಗೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಜನರಿಗೆ ಗೊತ್ತಿದೆ. ಅಪಪ್ರಚಾರದಿಂದ ಮತ ಗಳಿಸಲು ಸಾಧ್ಯವಿಲ್ಲ ಎಂಬುದನ್ನು ಅವರು ತಿಳಿದುಕೊಳ್ಳಬೇಕು’ ಎಂದರು.
‘ನಾನು ಆರನೇ ತರಗತಿಯಲ್ಲಿ ಇರುವಾಗಿನಿಂದ ಆರ್ಎಸ್ಎಸ್ ಬಗ್ಗೆ ತಿಳಿದುಕೊಂಡಿದ್ದೇನೆ. ಈ ಸಂಘಟನೆಯಿಂದ ಎಲ್ಲ ವಿಷಯಗಳನ್ನೂ ತಿಳಿದುಕೊಳ್ಳಬಹುದು. ಇದನ್ನು ಕುಮಾರಸ್ವಾಮಿ ಮೊದಲು ತಿಳಿದುಕೊಳ್ಳಲಿ. ರಾಜಕೀಯದಲ್ಲಿ ಟೀಕೆ ಸಹಜ. ಆದರೆ, ಚುನಾವಣೆಯಲ್ಲಿ ಮತ ಹಾಕುವವರು ಜನರು. ಟೀಕೆ ಹೇಗಿರಬೇಕು ಎಂಬುದನ್ನು ಜನಪ್ರತಿನಿಧಿಗಳು ತಿಳಿದುಕೊಳ್ಳಬೇಕು. ಚುನಾವಣೆ ನಡೆಯುವ ಕ್ಷೇತ್ರ ಮಾತ್ರವಲ್ಲ, ಎಲ್ಲ ಕಡೆಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಆಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.