ADVERTISEMENT

ವಿದ್ಯಾರ್ಥಿಗಳಿಗೆ ಯೋಗ, ಧ್ಯಾನ ಅತ್ಯಗತ್ಯ: ಗೋಪಾಲಕೃಷ್ಣ ದೇಲಂಪಾಡಿ

ಸಂತ ಅಲೋಶಿಯಸ್ ಕಾಲೇಜು ಯೋಗ ತರಬೇತಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 15:55 IST
Last Updated 9 ನವೆಂಬರ್ 2021, 15:55 IST
ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನಲ್ಲಿ ಎರಡು ದಿನಗಳ ಯೋಗ ಶಿಕ್ಷಣ ಕಾರ್ಯಾಗಾರದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್‌, ಡೀನ್ ಡಾ. ಈಶ್ವರ ಭಟ್ ಎಸ್., ನಿರ್ದೇಶಕ ಡಾ. ಡೆನ್ನಿಸ್ ಫರ್ನಾಂಡಿಸ್ , ಪರೀಕ್ಷಾಂಗ ಕುಲಸಚಿವ ಡಾ. ಆಲ್ವಿನ್ ಡೇಸಾ ಇದ್ದರು.
ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನಲ್ಲಿ ಎರಡು ದಿನಗಳ ಯೋಗ ಶಿಕ್ಷಣ ಕಾರ್ಯಾಗಾರದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ, ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್‌, ಡೀನ್ ಡಾ. ಈಶ್ವರ ಭಟ್ ಎಸ್., ನಿರ್ದೇಶಕ ಡಾ. ಡೆನ್ನಿಸ್ ಫರ್ನಾಂಡಿಸ್ , ಪರೀಕ್ಷಾಂಗ ಕುಲಸಚಿವ ಡಾ. ಆಲ್ವಿನ್ ಡೇಸಾ ಇದ್ದರು.   

ಮಂಗಳೂರು: ಹೊಸ ಶಿಕ್ಷಣ ನೀತಿ (ಎನ್‍ಇಪಿ) ಪ್ರಕಾರ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಕಡ್ಡಾಯವಾಗಿದ್ದು, ಶಿಕ್ಷಕರ ತರಬೇತಿಗಾಗಿ ಎರಡು ದಿನಗಳ ಯೋಗ ಶಿಕ್ಷಣ ಕಾರ್ಯಾಗಾರ ನಗರದ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನಲ್ಲಿ ಈಚೆಗೆ ನಡೆಯಿತು.

ದೇಲಂಪಾಡಿ ಯೋಗ ಪ್ರತಿಷ್ಠಾನದ ಸಹಯೋಗದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.

ಗೋಪಾಲಕೃಷ್ಣ ದೇಲಂಪಾಡಿಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿ, ‘ಯೋಗ ಶಿಕ್ಷಣ ವಿದ್ಯಾರ್ಥಿಗಳಿಗೆ ಅತೀ ಅಗತ್ಯ, ಸಕಾರಾತ್ಮಕ ಬೆಳವಣಿಗೆ ಯೋಗದಿಂದ ಸಾಧ್ಯ’ ಎಂದರು. ನೀತಾ ಶೆಟ್ಟಿ ಹಾಗೂ ಭವಾನಿ ರಾವ್ ಯೋಗ ಪ್ರಾತ್ಯಕ್ಷಿಕೆಯಲ್ಲಿ ಸಹಕರಿಸಿದರು.

ADVERTISEMENT

ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್‌ ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ವಿಕಸನಕ್ಕೆ ಯೋಗ ಮತ್ತು ಧ್ಯಾನ ಸಹಕಾರಿ’ ಎಂದರು. ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ. ಈಶ್ವರ ಭಟ್ ಎಸ್., ನಿರ್ದೇಶಕರಾದ ಡಾ. ಡೆನ್ನಿಸ್ ಫರ್ನಾಂಡಿಸ್, ಪರೀಕ್ಷಾಂಗ ಕುಲಸಚಿವ ಡಾ. ಆಲ್ವಿನ್ ಡೇಸಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.