ADVERTISEMENT

ಮಂಗಳೂರು | 'ನೈತಿಕತೆ ಬದುಕಿನ ಭಾಗವಾಗಲಿ'

‘ಸ್ಪಂದನ’ ವಿಚಾರ ಸಂಕಿರಣದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 6:40 IST
Last Updated 10 ಅಕ್ಟೋಬರ್ 2025, 6:40 IST
ಸ್ಕೂಲ್ ಆಫ್ ಸೋಷಿಯಲ್ ವರ್ಕ್ಸ್ ರೋಶನಿ ನಿಲಯದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಉದ್ಘಾಟಿಸಿದರು
ಸ್ಕೂಲ್ ಆಫ್ ಸೋಷಿಯಲ್ ವರ್ಕ್ಸ್ ರೋಶನಿ ನಿಲಯದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಉದ್ಘಾಟಿಸಿದರು   

ಮಂಗಳೂರು: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಆಡಳಿತದಲ್ಲಿ ಮತ್ತು ದೈನಂದಿನ ಜೀವನದಲ್ಲಿ ನೈತಿಕತೆ, ಸಾಮಾಜಿಕ ಹೊಣೆಗಾರಿಕೆಯ ನಿರ್ವಹಣೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.

ನಗರದ ಸ್ಕೂಲ್ ಆಫ್ ಸೋಷಿಯಲ್ ವರ್ಕ್ಸ್‌ ರೋಶನಿ ನಿಲಯದಲ್ಲಿ ಗುರುವಾರ ಆಯೋಜಿಸಿದ್ದ ‘ಸ್ಪಂದನ 2025’ ವಯಸ್ಸಾಗುವಿಕೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರ ಹಾಗೂ ಸಂಪತ್ತು ನ್ಯಾಯ ಮಾರ್ಗದ ದಿಕ್ಕನ್ನು ತಪ್ಪಿಸಬಹುದು. ಯುವ ಜನರು ವೈಯಕ್ತಿಕ ಹಾಗೂ ವೃತ್ತಿಪರ ಬದುಕಿನಲ್ಲಿ ಪ್ರಾಮಾಣಿಕತೆ, ವಿನಯ, ಮಾನವೀಯತೆಯ ಗುಣ ಬೆಳೆಸಿಕೊಳ್ಳಬೇಕು. ನೈತಿಕತೆ ಬದುಕಿನ ಭಾಗವಾಗಬೇಕು. ಅರ್ಥಪೂರ್ಣ ಕೊಡುಗೆಯಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯ ಎಂಬುದನ್ನು ಯುವಜನರು ಅರಿಯಬೇಕು ಎಂದರು.

ADVERTISEMENT

ದಿಕ್ಸೂಚಿ ಭಾಷಣ ಮಾಡಿದ ಲೂಯಿಸ್ ಮೆಂಡೋನ್ಸಾ ಮೆಮೋರಿಯಲ್ ಟ್ರಸ್ಟ್‌ನ ಸಾರ್ವಜನಿಕ ಆರೋಗ್ಯ ಸಲಹೆಗಾರ ಲಿಯೊನಾರ್ಡೊ ಮಚಾದೊ, ಸಂಶೋಧಕ ಸಂಶೋಧನೆಗಳು ನೀತಿಯಲ್ಲಿ ಅಳವಡಿಕೆಯಾಗಿ ಪ್ರಾಯೋಗಿಕವಾಗಿ ಅನುಷ್ಠಾನಗೊಂಡಾಗ ಸಮಾಜದ ಎಲ್ಲ ವರ್ಗದವರಿಗೆ ಇದರ ಪ್ರಯೋಜನ ದೊರೆಯುತ್ತದೆ ಎಂದರು.

ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಮೀನಾ ಮೊಂತೆರೊ ಅಧ್ಯಕ್ಷತೆ ವಹಿಸಿದ್ದರು.

ಸಂಶೋಧನಾ ಡೀನ್ ಸೆಬಾಸ್ಟಿನ್ ಕೆ.ವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಅನುರಾಧಾ ಸ್ವಾಗತಿಸಿದರು. ಭರತ್ ವಂದಿಸಿದರು. ಶರೋನ್ ಡಯಾಜ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.