ಬಂಟ್ವಾಳ: ಇಲ್ಲಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಲಲಿತಾ ಪಂಚಮಿ ಪ್ರಯುಕ್ತ ದೇವರ ಸೀರೆಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ಭಾನುವಾರ ವಿತರಿಸಲಾಯಿತು. ಇದೇ ವೇಳೆ ದೇವರಿಗೆ ವಿಶೇಷ ಪೂಜೆ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಚೇರಾ ಸೂರ್ಯನಾರಾಯಣ ರಾವ್, ಪವಿತ್ರಪಾಣಿ ಮಾಧವ ಭಟ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.