ADVERTISEMENT

ಎಸ್‌ಸಿಡಿಸಿಸಿ ಬ್ಯಾಂಕ್: ಗ್ರಾಹಕರಿಗೆ ವಿಶೇಷ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 6:38 IST
Last Updated 12 ಜೂನ್ 2020, 6:38 IST
ಎಂ.ಎನ್‌. ರಾಜೇಂದ್ರಕುಮಾರ್‌
ಎಂ.ಎನ್‌. ರಾಜೇಂದ್ರಕುಮಾರ್‌   

ಮಂಗಳೂರು: ಕೋವಿಡ್-19 ನಿಂದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೆಲವೊಂದು ಯೋಜನೆಗಳನ್ನು ತನ್ನ ಗ್ರಾಹಕರಿಗೆ ರೂಪಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್, ಆಗಸ್ಟ್‌ವರೆಗೆ ಸಾಲ ಮರುಪಾವತಿಯ ಬಗ್ಗೆ ವಿನಾಯಿತಿ ಘೋಷಿಸಿದ್ದು, ಈ ಅವಧಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ ಗ್ರಾಹಕರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತಮ ಸೌಲಭ್ಯ ನೀಡಲು ಮುಂದಾಗಿದೆ. ಗ್ರಾಹಕರು ಪಡೆದ ಸಾಲಗಳ ಕಂತನ್ನು ಈ ಸಮಯದಲ್ಲಿ ಮರುಪಾವತಿಸಿದಲ್ಲಿ, ಬಡ್ಡಿದರದಲ್ಲಿ ಶೇ 2 ರಷ್ಟು ವಿನಾಯಿತಿಯನ್ನು ಬ್ಯಾಂಕ್ ನೀಡಲಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಜನರಿಗೆ ಹಣಕಾಸಿನ ಅವಶ್ಯಕತೆ ಇರುವುದರಿಂದ ಚಿನ್ನಾಭರಣ ಸಾಲವನ್ನು ಗ್ರಾಹಕರಿಗೆ ಕನಿಷ್ಠ ಬಡ್ಡಿದರದಲ್ಲಿ ನೀಡುತ್ತಿದೆ. ಪ್ರತಿ ಗ್ರಾಂ.ಗೆ ₹3ಸಾವಿರ ಮೌಲ್ಯವನ್ನು ತಿಂಗಳ ಬಡ್ಡಿ ಶೇ 0.8 ರ ದರದಲ್ಲಿ ನೀಡಲು ಮುಂದಾಗಿದೆ. ಗ್ರಾಹಕರು ಹೆಚ್ಚಿನ ಅವಧಿಗೆ ಠೇವಣಿ ಇಟ್ಟಲ್ಲಿ ಶೇ 0.50ರಷ್ಟು ಹೆಚ್ಚಿನ ಬಡ್ಡಿಯನ್ನು ನೀಡಲಾಗುವುದು. ಈ ಸೌಲಭ್ಯ ಮುಂದಿನ 3 ತಿಂಗಳ ಅವಧಿಗೆ ಮಾತ್ರ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.

ADVERTISEMENT

ಗ್ರಾಹಕರ ಹಿತವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಕೈಗೊಂಡಿರುವ ಈ ಹೊಸ ಯೋಜನೆಗಳ ಸೌಲಭ್ಯವನ್ನು ಗ್ರಾಹಕರು ಬ್ಯಾಂಕಿನ ಎಲ್ಲ ಶಾಖೆಗಳಲ್ಲಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.