ಮಂಗಳೂರು: ಇಲ್ಲಿನ ತಹಶೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ದ್ವಿತೀಯ ದರ್ಜೆ ಸಹಾಯಕರೊಬ್ಬರನ್ನು ಲಂಚ ಪಡೆಯುತ್ತಿದ್ದಾಗಲೇ ಮಂಗಳವಾರ ಬಂಧಿಸಿದ್ದಾರೆ.
ಎಸ್ಡಿಎ ರಫೀಕ್ ಅಬ್ದುಲ್ ಬಂಧಿತ ಆರೋಪಿ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ ರಫೀಕ್ ₹40 ಸಾವಿರ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಂತ್ರಸ್ತರೊಬ್ಬರು ಎಸಿಬಿ ಕಚೇರಿಗೆ ದೂರು ನೀಡಿದ್ದರು. ಎಸಿಬಿ ಮಾರ್ಗದರ್ಶನದಂತೆ ದೂರುದಾರ ವ್ಯಕ್ತಿ, ಆರೋಪಿಗೆ ಹಣ ನೀಡುತ್ತಿದ್ದಾಗಲೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿಯನ್ನು ಬಂಧಿಸಿ ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.