ADVERTISEMENT

ಲೈಂಗಿಕ ಕಿರುಕುಳ: ರಾಜೇಶ್‌ ಭಟ್‌ ವಿರುದ್ಧ ಲುಕ್‌ಔಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 19:49 IST
Last Updated 9 ನವೆಂಬರ್ 2021, 19:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ‘ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊಂದಿ, ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಪತ್ತೆಗಾಗಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಲಾಗಿದೆ. ಆರೋಪಿಯ 12 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆರೋಪಿ ಪತ್ತೆಗೆ ಎಸಿಪಿ ರಂಜಿತ್ ಬಂಡಾರು ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ನಾಲ್ಕು ತಂಡಗಳು ಆರೋಪಿಯ ಪತ್ತೆ ಕಾರ್ಯದಲ್ಲಿ ನಿರತವಾಗಿವೆ. ಸಾಕ್ಷ್ಯನಾಶಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪವಿತ್ರಾ ಆಚಾರ್ಯ ಹಾಗೂ ಅನಂತ ಭಟ್ ಎಂಬುವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು
ಹೇಳಿದ್ದಾರೆ.

ಆರೋಪಿಯ ಹೆಸರಿನಲ್ಲಿದ್ದ 12 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕ್‌ಗಳಿಗೆ ಮನವಿ ನೀಡಲಾಗಿದೆ. ಆರೋಪಿಯು ವಿದೇಶಕ್ಕೆ ಪ್ರಯಾಣಿಸುವುದನ್ನು ತಡೆಯಲು ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

ADVERTISEMENT

‘ಆರೋಪಿ ಆಂಧ್ರಪ್ರದೇಶ, ತಮಿಳುನಾಡು ಮೊದಲಾದೆಡೆ ಸಂಚರಿಸುತ್ತಿರುವ ಮಾಹಿತಿ ಲಭಿಸಿದೆ. ಶೀಘ್ರದಲ್ಲಿ ತನಿಖಾ ತಂಡಗಳು ಆರೋಪಿಯನ್ನು ಬಂಧಿಸಲಿವೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.