ADVERTISEMENT

ವೆಂಕಟರಮಣ ಭಟ್‌ಗೆ ಶೇಣಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 4:23 IST
Last Updated 13 ಆಗಸ್ಟ್ 2024, 4:23 IST
<div class="paragraphs"><p>ವೆಂಕಟರಮಣ</p></div>

ವೆಂಕಟರಮಣ

   

ಮಂಗಳೂರು: ನಗರದ ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟಬಲ್ ಟ್ರಸ್ಟ್ ನೀಡುವ ಶೇಣಿ ಪ್ರಶಸ್ತಿಗೆ ಸ್ತ್ರೀ ವೇಷಧಾರಿ ಪಾತಾಳ ವೆಂಕಟರಮಣ ಭಟ್ ಆಯ್ಕೆ ಆಗಿದ್ದಾರೆ.

₹30 ಸಾವಿರ ನಗದು, ಪ್ರಶಸ್ತಿಪತ್ರ ಒಳಗೊಂಡ ಪ್ರಶಸ್ತಿಯನ್ನು ಇದೇ 15ರಂದು ಸಂಜೆ 4.20ಕ್ಕೆ ನಗರದ ಉರ್ವಸ್ಟೋರ್‌ನ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಶೇಣಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.

ADVERTISEMENT

ಅಂದು ಮಧ್ಯಾಹ್ನ 2.30ರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಎಂ.ಆರ್‌.ವಾಸುದೇವ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.