ADVERTISEMENT

ಐಟಿ: ಪ್ರಧಾನ ಆಯುಕ್ತರ ಕಚೇರಿ ಸ್ಥಳಾಂತರ ಇಲ್ಲ -ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಟ್ವೀಟ್ ಮೂಲಕ ಸಂಸದ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 15:07 IST
Last Updated 17 ಸೆಪ್ಟೆಂಬರ್ 2020, 15:07 IST
ನಳಿನ್‌ ಕುಮಾರ್ ಕಟೀಲ್
ನಳಿನ್‌ ಕುಮಾರ್ ಕಟೀಲ್   

ಮಂಗಳೂರು: ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯನ್ನು ಮಂಗಳೂರಿನಲ್ಲಿಯೇ ಮುಂದುವರಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಸದ ನಳಿನ್‌ ಕುಮಾರ್ ಕಟೀಲ್, ‘ಕರಾವಳಿ ಕರ್ನಾಟಕದ ತೆರಿಗೆದಾರರ ಹಿತಾಸಕ್ತಿಗೆ ಪೂರಕವಾಗಿ, ನನ್ನ ವೈಯಕ್ತಿಕ ಮನವಿಗೆ ಸ್ಪಂದಿಸಿದ ವಿತ್ತ ಸಚಿವೆ ಹಾಗೂ ಸಹಕರಿಸಿದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಡಿ.ವಿ.ಸದಾನಂದ ಗೌಡ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸಹಾ ಟ್ವೀಟ್ ಮಾಡಿದ್ದು, ‘ಈ ಕುರಿತು ವಿತ್ತ ಸಚಿವರ ಬಳಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಅವರಿಗೆ ಕೃತಜ್ಞತೆಗಳು’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.