ಉಜಿರೆ: ಕಪಿಲಾ ನದಿಯ ಪ್ರವಾಹದಿಂದಾಗಿ ಶಿಶಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಉಂಟಾದ ಹಾನಿಯನ್ನು ಗುರುವಾರ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಂದಾಯ ನಿರೀಕ್ಷಕ ಪಾವಡಪ್ಪ ದೊಡಮನಿ, ಶಿಶಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧೀನ್, ಉಪಾಧ್ಯಕ್ಷೆ ಯಶೋಧರ, ಪಿಡಿಒ ದಿನೇಶ್ ಎಂ., ಆಡಳಿತ ಅಧಿಕಾರಿ ಶಿವಕುಮಾರ್, ಗ್ರಾಮ ಸಹಾಯಕ ವೀರಪ್ಪ ಗೌಡ ಉಪಸ್ಥಿತರಿದ್ದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.